ಪಾಕಿಸ್ತಾನವೇ ದಾಳಿ ನಡೆಸಿದೆ ಎನ್ನುವುದಕ್ಕೆ ನಮ್ಮ ಬಳಿ ಸಾಕ್ಷಿಗಳಿವೆ: ಭಾರತ

Published : May 03, 2017, 02:54 PM ISTUpdated : Apr 11, 2018, 12:39 PM IST
ಪಾಕಿಸ್ತಾನವೇ ದಾಳಿ ನಡೆಸಿದೆ ಎನ್ನುವುದಕ್ಕೆ ನಮ್ಮ ಬಳಿ ಸಾಕ್ಷಿಗಳಿವೆ: ಭಾರತ

ಸಾರಾಂಶ

ಭಾರತೀಯ ತನಿಖಾ ತಂಡವು ಗಡಿ ನಿಯಂತ್ರಣ ರೇಖೆ ಬಳಿ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದು ಪಾಕಿಸ್ತಾನ ಸೈನಿಕರೇ ಭಾರತೀಯ ಸೈನಿಕರನ್ನು ಹತ್ಯೆಗೈದಿದ್ದು ಎಂದು ದೃಢಪಡಿಸಿದೆ.

ನವದೆಹಲಿ (ಮೇ.03): ಭಾರತೀಯ ತನಿಖಾ ತಂಡವು ಗಡಿ ನಿಯಂತ್ರಣ ರೇಖೆ ಬಳಿ ರಕ್ತದ ಮಾದರಿಗಳನ್ನು ಸಂಗ್ರಹಿಸಿದ್ದು ಪಾಕಿಸ್ತಾನ ಸೈನಿಕರೇ ಭಾರತೀಯ ಸೈನಿಕರನ್ನು ಹತ್ಯೆಗೈದಿದ್ದು ಎಂದು ದೃಢಪಡಿಸಿದೆ.

ಈ ವಿಚಾರವನ್ನು ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಪಾಕಿಸ್ತಾನದ ಹೈ ಕಮಿಷನರ್ ಅಬ್ದುಲ್ ಬಸೀತ್ ಗೆ ಮಾಹಿತಿ ನೀಡಿದ್ದಾರೆ. ಆದರೆ ಅಬ್ದುಲ್ ಬಸೀತ್ ಇದನ್ನು ನಿರಾಕರಿಸಿದ್ದಾರೆ.

ಮೇ 01 ರಂದು ನಡೆದ ದಾಳಿಯಲ್ಲಿ ಪಾಕಿಸ್ತಾನದ ಸೇನೆಯೇ ನಮ್ಮ ಸೈನಿಕರನ್ನು ಹತ್ಯೆಗೈದಿದ್ದು ಎನ್ನುವುದಕ್ಕೆ ನಮ್ಮ ಬಳಿ ಸೂಕ್ತ ಪುರಾವೆಗಳಿವೆ. ರಕ್ತದ ಮಾದರಿಗಳನ್ನು ನಮ್ಮ ತನಿಖಾಗಾರರು ಸಂಗ್ರಹಿಸಿದ್ದಾರೆ ಎಂದು ವಿದೇಶಾಂಗ ವಕ್ತಾರ ಗೋಪಾಲ್ ಬಾಗ್ಲೆ ಹೇಳಿದ್ದಾರೆ.  

ಇಂತದ್ದೊಂದು ಹೇಯ ಕೃತ್ಯಕ್ಕೆ ಹೊಣೆಯಾದ ಪಾಕಿಸ್ತಾನ ಸೇನೆ ಹಾಗೂ ಕಮಾಂಡರ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಆಗ್ರಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..
ಅಡಕೆ ಬೆಳೆಗಾರರ ನೆರವಿಗೆ ಕೇಂದ್ರ ತುರ್ತಾಗಿ ಮಧ್ಯಪ್ರವೇಶಿಸಲಿ: ಸಂಸದ ಬಿ.ವೈ.ರಾಘವೇಂದ್ರ