
ಮಂಗಳೂರು(ಸೆ.01): ಆತ್ಮಹತ್ಯೆಯ ಆಟವೆಂದೇ ಪ್ರಚಲಿತದಲ್ಲಿರುವ ಬ್ಲೂ ವೇಲ್ ಗೇಮ್ ಇದೀಗ ಕರಾವಳಿಗೂ ಕಾಲಿಟ್ಟಿದೆ. ಮಂಗಳೂರಿನ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ತಿಮಿಂಗಿಲು ಆಕಾರದಲ್ಲಿ ಕೈ ಕುಯ್ದುಕೊಂಡಿದ್ದಾನೆ.
ಯುವಕ ಬ್ಲೂ ವೇಲ್ ಗೇಮ್ನ ನಿಯಮದಂತೆ ಕೈ ಕುಯ್ದುಕೊಂಡಿದ್ದು, ಅವನ ಮೊಬೈಲ್'ನಲ್ಲಿ ಬ್ಲೂ ವೇಲ್ ಗೇಮ್ ಪತ್ತೆಯಾಗಿದೆ. ಶಿಕ್ಷಕರು ಹಾಗೂ ಪೋಷಕರಿಂದ ಮುಂದೆ ಆಗುವಂತಹ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ಇನ್ನು ವಿದ್ಯಾರ್ಥಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.