
ಬೆಂಗಳೂರು(ಆ.04): ಕನ್ನಡ ಪರ ಸಂಘಟನೆ ಮತ್ತು ರಾಜ್ಯ ಸರ್ಕಾರದ ಹೋರಾಟಕ್ಕೆ ಮಣಿದಿರುವ ಬಿಎಂಆರ್ ಎಲ್ ಸಿ ಅಧಿಕಾರಿಗಳು ಮೆಟ್ರೋ ನಿಲ್ದಾಣದಲ್ಲಿ ಹಾಕಲಾಗಿದ್ದ ಹಿಂದಿ ನಾಮಫಲಕ ತೆರವುಗೊಳಿಸಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಿಂದಿ ನಾಮಫಲಕ ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಲ್ಲದೆ ವಿವಿಧ ಕನ್ನಡ ಪರ ಸಂಘಟನೆಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೂಡ ಹಿಂದಿ ನಾಮಫಲಕ ತೆರವು ಮಾಡುವಂತೆ ಬಿಎಂಆರ್ ಸಿಎಲ್'ಸಿ ಮನವಿ ಮಾಡಿದ್ದವು . ಹಿಂದಿ ಭಾಷೆ ಹೇರಿಕೆ ವಿರುದ್ಧ ಹೋರಾಟ ದಿನದಿಂದ ದಿನಕ್ಕೆ ತೀವ್ರತೆ ಪಡೆಯುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಹಿಂದಿ ನಾಮಫಕಲ ತೆರವುಗಳಿಸಿದ್ದಾರೆ. ಮೊದಲ ಹಂತದಲ್ಲಿ ಚಿಕ್ಕ ಪೇಟೆ ಮತ್ತು ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಹಾಕಲಾಗಿದ್ದ ನಾಮಫಲಕ ತೆರವುಗೊಳಿಸಲಾಗಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.