
ಬೆಂಗಳೂರು(ಆ.18): ರಸ್ತೆಯಲ್ಲಿ ಬೈಕ್ ಸವಾರರು ಸಲ್ಪ ಯಾಮಾರಿದ್ರೂ ಸಾವು ಕಟ್ಟಿಟ್ಟ ಬುತ್ತಿ. ಇದಕ್ಕೆ ಸಾಕ್ಷಿ ಎಂಬಂತೆ ಡಿವೈಡರ್ ಪಾಸ್ ಮಾಡುವ ವೇಳೆ ಬೈಕ್ ಗೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಈ ಘಟನೆ ನಡೆದಿರೋದು ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ವೀವರ್ಸ್ ಕಾಲೋನಿಯಲ್ಲಿ ನಡೆದಿದೆ. ಆದ್ರೆ ಈ ಭಯಾನಕ ಅಪಘಾತ ಯಾವ ರೀತಿಯಲ್ಲಿ ನಡೆದಿದೆ ಎಂಬುದನ್ನ ನೋಡಿದ್ರೆ, ಬೈಕ್ ಸವಾರ ಬದುಕೋದೆ ಕಷ್ಟ. ಇನ್ನೂ ಈ ಅಪಘಾತ ನಡೆದ ಸ್ಥಳದ ಎಲ್ಲಾ ದೃಶ್ಯಗಳು ಸಿಸಿಟಿವಿಯ ಕ್ಯಾಮರದಲ್ಲಿ ಸೆರೆಯಾಗಿದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್ ಗೆ ಗುದ್ದಿದ ಪರಿಣಾಮ, ಬೈಕ್ ಬಸ್ ಅಡಿ ಸಿಲುಕಿದ್ರೆ, ಸವಾರ ರಮೇಶ್ ಬರೋಬ್ಬರಿ 15 ಅಡಿ ದೂರಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇನ್ನೂ ಸವಾರ ರಮೇಶ್ ವೃತ್ತಿಯಲ್ಲಿ ಟೈಲರ್ ಕೆಲಸ ಮಾಡುತ್ತಿದ್ದು, ಮನೆಯಿಂದ ಟೈಲರ್ ಅಂಗಡಿಗೆ ತೆರಳುವಾಗ ಈ ಅಪಘಾತ ನಡೆದಿದೆ. ಸಧ್ಯ ಗಾಯಾಳು ರಮೇಶ್ ಕೋಮಾ ಸ್ಥಿತಿಯಲ್ಲಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ಬಳಿಕ ಕನಿಷ್ಠ ಪಕ್ಷ ಬೈಕ್ ಸವಾರನ ಬಗ್ಗೆ ಮಾನವೀಯತೆಯನ್ನ ತೋರದೆ, ಬಸ್ ಚಾಲಕ ಸ್ಥಳದಲ್ಲೇ ಬಸ್ ಬಿಟ್ಟು ಓಡಿ ಹೋಗಿರೊ ದೃಶ್ಯ ಕೂಡ ಸೆರೆಯಾಗಿದೆ. ನಂತರ ಸ್ಥಳೀಯ ಜನರು ಗಾಯಾಳು ರಮೇಶನನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಘಟನೆ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.