
ಬೆಂಗಳೂರು (ಸೆ.19): ಅಂತೂ ಇಂತೂ ಬಿಎಂಟಿಸಿ ನಿಗಮ ಎಚ್ಚೆತ್ತುಕೊಂಡಿದೆ. ಪದೇ ಪದೇ ಬಿಎಂಟಿಸಿ ಬಸ್ಗಳಿಂದ ಆಗುತ್ತಿರುವ ಮುಖಭಂಗವನ್ನ ತಪ್ಪಿಸಿಕೊಳ್ಳಲು ಬಿಎಂಟಿಸಿ ನಿಗಮ ಮುಂದಾಗಿದೆ.
ಕಳೆದ ತಿಂಗಳು ಪೀಣ್ಯಾ ಬಳಿ ವೇಗವಾಗಿ ಹೋಗುತ್ತಿದ್ದ ಬಸ್ನ ಚಕ್ರ ಕಳಚಿ ಬಿದ್ದ ಘಟನೆ ನಡೆದಿತ್ತು, ಅಷ್ಟೇ ಅಲ್ಲದೆ ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಬಸ್ ಕೂಡಾ ಮಾರ್ಗ ಮಧ್ಯೆಯೇ ಕೈಕೊಟ್ಟಿತ್ತು. ಇದಕ್ಕೆ ಕಾರಣ ಏನು ಎಂಬುವುದರ ಬಗ್ಗೆ ಸುವರ್ಣನ್ಯೂಸ್ ಸವಿಸ್ತಾರವಾದ ಸುದ್ದಿಯನ್ನ ಪ್ರಸಾರ ಮಾಡಿತ್ತು . ಸುವರ್ಣ ನ್ಯೂಸ್ ವರದಿ ಬಳಿಕ ಎಚ್ಚೆತ್ತ ಬಿಎಂಟಿಸಿ ನಿಗಮ ಎಂಟು ವರ್ಷ ಪೂರೈಸಿದ ಬಿಎಂಟಿಸಿ ಬಸ್ಗಳನ್ನ ರಸ್ತೆಗೆ ಇಳಿಸದಿರಲು ಬಿಎಂಟಿಸಿ ಮುಂದಾಗಿದೆ. ಸುಮಾರು ಎರಡು ಸಾವಿರಕ್ಕೂ ಹೆಚ್ಚು ಬಿಎಂಟಿಸಿ ಬಸ್ಗಳು ಎಂಟು ವರ್ಷ ಪೂರೈಸಿದ್ದು ಅವುಗಳನ್ನ ಗುಜರಿಗೆ ಹಾಕಲು ಬಿಎಂಟಿಸಿ ಮುಂದಾಗಿದೆ. ಇದು ಸುವರ್ಣನ್ಯೂಸ್ ಇಂಪ್ಯಾಕ್ಟ್!
ವೇಗವಾಗಿ ಚಲಿಸುತ್ತಿದ್ದ ಬಸ್ ಚಕ್ರ ಕಳಚಿ ಬಿದ್ದು ಕೂದಲಂತರದಲ್ಲಿ ಭಾರಿ ಅವಘಡ ತಪ್ಪಿತ್ತು, ಇದಾದ ನಂತರ ನಿನ್ನೆ ಕೂಡಾ ವೇಗವಾಗಿ ಚಲಿಸುತ್ತಿದ್ದ ಬಸ್ ಚಕ್ರ ಕಳಚಿದೆ. ಹೀಗಾಗಿ ಇನ್ಮುಂದೆ ಎಂಟು ವರ್ಷಕ್ಕಿಂತ ಮೇಲ್ಪಟ್ಟ ಬಸ್ಗಳನ್ನ ರಸ್ತೆಗೆ ಇಳಿಸುವುದಿಲ್ಲ ಎಂದು ಬಿಎಂಟಿಸಿ ಅಧ್ಯಕ್ಷ ನಾಗರಾಜ ಯಾದವ್ ಸುವರ್ಣನ್ಯೂಸ್ಗೆ ತಿಳಿಸಿದ್ದಾರೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.