ಅಟಲ್ ಅಸ್ಥಿ ವಿಸರ್ಜನೆ ವೇಳೆ ದೋಣಿ ಮಗುಚಿ ನೀರಿಗೆ ಬಿದ್ದ ಬಿಜೆಪಿಗರು

Published : Aug 27, 2018, 12:05 PM ISTUpdated : Sep 09, 2018, 09:01 PM IST
ಅಟಲ್ ಅಸ್ಥಿ ವಿಸರ್ಜನೆ ವೇಳೆ ದೋಣಿ ಮಗುಚಿ ನೀರಿಗೆ ಬಿದ್ದ ಬಿಜೆಪಿಗರು

ಸಾರಾಂಶ

ವಾಜಪೇಯಿ ಅವರ ಅಸ್ಥಿ ವಿಸರ್ಜನೆಯ ವೇಳೆ ಬಿಜೆಪಿಯ ಮುಖಂಡರು ಇದ್ದ ದೋಣಿ ಮಗುಚಿ ಸ್ವಲ್ಪದರಲ್ಲೇ ಭಾರೀ ಅವಘಡದಿಂದ ಪಾರಾದ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. 

ಲಖನೌ: ಮಾಜಿ ಪ್ರಧಾನಿ ವಾಜಪೇಯಿ ಅವರ ಅಸ್ಥಿ ವಿಸರ್ಜನೆಯ ವೇಳೆ ಬಿಜೆಪಿಯ ಓರ್ವ ಸಂಸದ ಹಾಗೂ ಶಾಸಕರೊಬ್ಬರು ಇದ್ದ ದೋಣಿ ಮಗುಚಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ಶನಿವಾರ ನಡೆದಿದೆ. 

ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ರಾಮಪತಿ ರಾಮ್ ತ್ರಿಪಾಠಿ, ಸಂಸದ ಹರೀಶ್ ದ್ವಿವೇದಿ, ಶಾಸಕ ಡೇಸ್ ರಾಮ್ ಚೌಧರಿ, ಹಿರಿಯ ಬಿಜೆಪಿ ಮುಖಂಡರು ಮತ್ತು ಎಸ್‌ಪಿ ದಿಲೀಪ್ ಕುಮಾರ್ ಅವರು ದೋಣಿಯಲ್ಲಿ ಅಸ್ಥಿ ವಿಸರ್ಜನೆಗೆ ತೆರಳಿದ್ದರು. ಆದರೆ ಭಾರ ಹೆಚ್ಚಾದ ಕಾರಣ, ಸ್ವಲ್ಪ ದೂರ ಸಾಗುತ್ತಲೇ ದೋಣಿ ಮಗುಚಿ ಎಲ್ಲರೂ ಕೆಳಗೆ ಬಿದ್ದಿದ್ದಾರೆ.

 ತಕ್ಷಣವೇ ಪೊಲೀಸ್ ಸಿಬ್ಬಂದಿ ನದಿಗೆ ಹಾರಿ ಗಣ್ಯರನ್ನು ರಕ್ಷಿಸಿದ್ದಾರೆ. ದಡದ ಸಮೀಪವೇ ಈ ಘಟನೆ ನಡೆದಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮತ್ತೆ ಟಿಪ್ಪು ಜಯಂತಿ ವಿವಾದ ಭುಗಿಲು
ಉ.ಕ. ಚರ್ಚೆ ವೇಳೆ ವಿಪಕ್ಷಕ್ಕೆ ತಿರುಗೇಟು: ಸಿಎಲ್‌ಪಿ ನಿರ್ಧಾರ