ಬೆಂಗಳೂರಿನಲ್ಲಿ ದಲೈಲಾಮ ಹತ್ಯೆಗೆ ಸ್ಕೆಚ್?

Published : Oct 01, 2018, 09:43 AM ISTUpdated : Oct 01, 2018, 10:55 AM IST
ಬೆಂಗಳೂರಿನಲ್ಲಿ ದಲೈಲಾಮ ಹತ್ಯೆಗೆ ಸ್ಕೆಚ್?

ಸಾರಾಂಶ

ಹೊರ ಬಿತ್ತು ಸ್ಫೋಟಕ ಮಾಹಿತಿ | ಧರ್ಮಗುರು ದಲೈಲಾಮಾ ಹತ್ಯೆಗೆ ಸ್ಕೆಚ್ | ಬೋಧಗಯಾ ಸ್ಫೋಟದ ಪ್ರಮುಖ ಆರೋಪಿಯಿಂದ ಹತ್ಯೆಗೆ ಸ್ಕೆಚ್ 

ಬೆಂಗಳೂರು (ಅ. 01):  ಬೆಂಗಳೂರಿನಲ್ಲಿ ಧರ್ಮ ಗುರು ದಲೈ ಲಾಮ ಹತ್ಯೆಗೆ ಸ್ಕೆಚ್ ಹಾಕಲಾಗಿದೆ ಎಂದು ಬೋಧಗಯಾ ಸ್ಫೋಟದ ಆರೋಪಿಗಳಿಂದ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. 

ಬೋಧಗಯಾ ಸ್ಫೋಟದ ಪ್ರಮುಖ ಆರೋಪಿ ರಾಮನಗರದಲ್ಲಿ ಬಂಧಿತನಾಗಿದ್ದ. ಜಹಿದ್ದೀಲ್ ಇಸ್ಲಾಂ  ಅಲಿಯಾಸ್ ಮುನೀರ್ ಎಂಬಾತನನ್ನು ಬಂಧಿಸಲಾಗಿತ್ತು. ನಂತರ ಬೆಂಗಳೂರಿನಲ್ಲಿ ಅದಿಲ್‌ಎಂಬಾತನನ್ನು ಬಂಧಿಸಲಾಗಿತ್ತು.  ಮುನೀರ್ ಜಮಾತ್ ಮುಜಾಹೀದ್ದೀನ್ ಬಾಂಗ್ಲಾದೇಶ್ ಉಗ್ರ ಸಂಘಟನೆಯವನು. ಇವನು  ಬಂಧನಕ್ಕೂ ಮುಂಚೆ ನಾಲ್ಕು ವರ್ಷ ಬೆಂಗಳೂರಿನಲ್ಲಿ ವಾಸವಾಗಿದ್ದ.  ಈ ವೇಳೆ ದಲೈಲಾಮ ಮುಗಿಸಲು ಸ್ಕೆಚ್ ರೆಡಿ ಮಾಡಿದ್ದ.  ಬೋಧಗಯಾ ವಿಚಾರಣೆ ವೇಳೆ ಸ್ಕೆಚ್ ನ ಬಗ್ಗೆ ಜಹೀದ್ದೀಲ್ ಇಸ್ಲಾಂ ಬಾಯಿ ಬಿಟ್ಟಿದ್ದ. 

ಈಗಾಗಲೇ ಸ್ಫೋಟದ ಎನ್ ಐಎ ಚಾರ್ಜ್ ಶೀಟ್ ಸಲ್ಲಿಸಿದೆ.  ಈ ಕುರಿತು ಕರ್ನಾಟಕ ಡಿಜಿ ಐ ಜಿಪಿಗೂ‌  ಎನ್ ಐ ಎ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇಂದ್ರ, ಮೋದಿ ಮಾಡಿದ್ದೆಲ್ಲ ತಪ್ಪು ಎನ್ನಲಾಗದು, Vote Chori ಆರೋಪದಿಂದ ಕಾಂಗ್ರೆಸ್‌ನ ನೈತಿಕತೆ ಕುಸಿತ!
ಪ್ರಧಾನಿ ಮೋದಿ ಸಮಾಧಿ ಉದ್ಘೋಷದ ವಿರುದ್ಧ ಸಂಸತ್ತಲ್ಲಿ ಗದ್ದಲ: ಕ್ಷಮೆಗೆ ಆಗ್ರಹ