
ಶ್ರೀನಗರ(ಜೂ.14): ಹಿಜ್ಬುಲ್ ಉಗ್ರ ಸಮೀರ್ ಟೈಗರ್ನನ್ನು ಹತ್ಯೆಗೈದಿದ್ದ ಭಾರತೀಯ ಸೇನಾ ಯೋಧ ಔರಂಗಜೇಬ್ ಅವರ ಶವ ಪುಲ್ವಾಮಾ ಜಿಲ್ಲೆಯ ಗೂಸು ಬಳಿ ದೊರೆತಿದೆ. ಔರಂಗಜೇಬ್ ಅವರನ್ನು ಇಂದು ಶಸ್ತ್ರಸಜ್ಜಿತ ಉಗ್ರರು ಅಪಹರಿಸಿದ್ದರು.
23 ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ ಯೋದ ಔರಂಗಜೇಬ್ ಇಂದು ಮಧ್ಯಾಹ್ನ ಕರ್ತವ್ಯದಿಂದ ಮನೆಗೆ ಮರಳುತ್ತಿದ್ದಾಗ ಶಸ್ತ್ರಸಜ್ಜಿತ ಉಗ್ರರ ಗುಂಪು ಅವರನ್ನು ಅಪಹರಿಸಿತ್ತು. ಆದರೆ ಕೆಲವೇ ಕ್ಷಣಗಳ ಮುಂವೆ ಅವರ ಮೃತದೇಹ ಪತ್ತೆಯಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ಮೇ ತಿಂಗಳಲ್ಲಿ ನಡೆದಿದ್ದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಉಗ್ರ ಸಮೀರ್ ಟೈಗರ್ನನ್ನು ಯೋಧ ಔರಂಗಜೇಬ್ ಹತ್ಯೆ ಮಾಡಿದ್ದರು. ಸಮೀರ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಉಗ್ರರು ಬೆದರಿಕೆ ಕೂಡ ಹಾಕಿದ್ದರು. ಅದರಂತೆ ಔರಂಗಜೇಬ್ ಅವರನ್ನು ಅಪಹರಿಸಿ ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.