ಜಿಎಸ್'ಟಿ ಪ್ರಚಾರ ರಾಯಭಾರಿಯಾಗಿ ಅಮಿತಾಬಚ್ಚನ್ ನೇಮಕ

Published : Jun 20, 2017, 06:38 PM ISTUpdated : Apr 11, 2018, 12:48 PM IST
ಜಿಎಸ್'ಟಿ ಪ್ರಚಾರ ರಾಯಭಾರಿಯಾಗಿ ಅಮಿತಾಬಚ್ಚನ್ ನೇಮಕ

ಸಾರಾಂಶ

ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರನ್ನು  ಜಿಎಸ್‌ಟಿ ಪ್ರಚಾರ ರಾಯಭಾರಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. 

ನವದೆಹಲಿ (ಜೂ.20): ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರನ್ನು  ಜಿಎಸ್‌ಟಿ ಪ್ರಚಾರ ರಾಯಭಾರಿಯನ್ನಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ. 

ಕೇಂದ್ರ ಅಬಕಾರಿ ಮತ್ತು ಸೀಮಾ ಸುಂಕ ಮಂಡಳಿಯು ಬಚ್ಚನ್‌ ಅವರನ್ನು ಜಿಎಸ್‌ಟಿ ಪ್ರಚಾರ ರಾಯಭಾರಿ ನೇಮಕವನ್ನು ಅಧಿಕೃತಗೊಳಿಸಲಿದೆ. 40 ಸೆಕೆಂಡ್‌ಗಳ ವಿಡಿಯೊದಲ್ಲಿ  ಬಚ್ಚನ್‌ ಕಾಣಿಸಿಕೊಂಡಿದ್ದು, ರಾಷ್ಟ್ರ ಧ್ವಜದಲ್ಲಿ ಇರುವ ಮೂರು ಬಣ್ಣಗಳು ಏಕರೂಪತೆ ಸಾರುವಂತೆ, ‘ಜಿಎಸ್‌ಟಿ ಸಹ ಒಂದು ದೇಶ, ಒಂದು ತೆರಿಗೆ, ಒಂದು ಮಾರುಕಟ್ಟೆ ಸೃಷ್ಟಿಸುವ ಮಹತ್ವದ ನಿರ್ಧಾರವಾಗಿದೆ’ ಎಂಬ ಸಂದೇಶವನ್ನು ನೀಡಿದ್ದಾರೆ. ‘ಏಕರೂಪದ ರಾಷ್ಟ್ರೀಯ ಮಾರುಕಟ್ಟೆ ಸೃಷ್ಟಿಸಲು ಜಿಎಸ್‌ಟಿ ಮಹತ್ವದ ಹೆಜ್ಜೆಯಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವಾಲಯ ಟ್ವೀಟ್‌ ಮಾಡಿದ್ದು, ಬಚ್ಚನ್‌ ಅವರು ಜಿಎಸ್‌ಟಿ  ಬಗ್ಗೆ ಪ್ರಚಾರ ಮಾಡುತ್ತಿರುವ ವಿಡಿಯೊ ತುಣುಕನ್ನು  ಟ್ವೀಟ್‌ ಜತೆ ಸೇರ್ಪಡೆ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ