
ಮುಂಬೈ (ನ. 27): ಅಪರೂಪದ ನರರೋಗದಿಂದ ಬಳಲುತ್ತಿರುವ ಬಾಲಿವುಡ್ ನಟ ಇರ್ಫಾನ್ ಖಾನ್ ಅವರು ಬ್ರಿಟನ್ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರ ನಡುವೆಯೇ ಅವರು ಇತ್ತೀಚೆಗೆ ಹೆಚ್ಚು ಸುದ್ದಿ ಮಾಡದೆಯೇ ಭಾರತಕ್ಕೆ ಬಂದು, ನಾಸಿಕ್ನಲ್ಲಿರುವ ತ್ರಯಂಬಕೇಶ್ವರ ಶಿವಾಲಯಕ್ಕೆ ಭೇಟಿ ನೀಡಿ, ಹೋಮ-ಹವನ ನಡೆಸಿದ್ದಾರೆ. 2 ದಿನಗಳ ಕಾಲ ನಾಸಿಕ್ನಲ್ಲಿ ತಂಗಿದ್ದ ಖಾನ್, ವಿವಿಧ ಪೂಜಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಈ ಕಾರ್ಯಕ್ರಮದ ಬಳಿಕ ಅವರು ಯಾರಿಗೂ ತಿಳಿಸದೆ, ಪುನಃ ಸೀದಾ ಮರಳಿ ಲಂಡನ್ಗೆ ತೆರಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.