
ದುಬೈ: ಬಾಲಿವುಡ್ ನಟಿ ಶ್ರಿದೇವಿ ಅಕಾಲಿಕ ಮರಣಕ್ಕೆ ತುತ್ತಾಗಿದ್ದು, ದೇಶದ ಚಿತ್ರರಂಗವೇ ದಿಗ್ಭ್ರಮೆಗೊಂಡಿದೆ.
ಬಾಲನಟಿಯಾಗಿ, 4ನೇ ವರ್ಷಕ್ಕೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ 54 ವರ್ಷದ ಈ ನಟಿ ದೂರದ ದುಬೈನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಬಾಲನಟಿಯಾಗಿ ಕನ್ನಡದ 'ಭಕ್ತ ಕುಂಬಾರ', ಬಾಲಭಾರತ ಸೇರಿ ತಮಿಳು, ತೆಲಗು ಚಿತ್ರಗಳಲ್ಲಿಯೂ ನಟಿಸಿದ್ದರು ಶ್ರೀದೇವಿ. ಡಾ.ರಾಜ್ಕುಮಾರ್, ರಜನೀಕಾಂತ್, ಕಮಲ್ ಹಾಸನ್, ಚಿರಂಜೀವಿ ಸೇರಿ ಹಲವು ಖ್ಯಾತ ನಟರೊಂದಿಗೆ ನಟಿಸಿದ್ದರು. ಅನಿಲ್ ಕಪೂರ್ ಮತ್ತು ಇವರ ಜೋಡಿ ಬಾಲಿವುಡ್ನಲ್ಲಿ ಉತ್ತಮ ಹೆಸರು ಮಾಡಿತ್ತು.
ಬಾಲಿವುಡ್ ಚಿತ್ರದಲ್ಲಿ ನಟಿಸಿದ ಮೋಹಕ ತಾರೆ, ದುಬೈನಲ್ಲಿ ವಿವಾಹ ಸಮಾರಂಭಕ್ಕೆ ತೆರಳಿದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಂಗೀತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಫೋಟೋವನ್ನು ಶ್ರೀದೇವಿ ಶೇರ್ ಮಾಡಿಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.