
ನೆಲಮಂಗಲ(ನ.27): ರೌಡಿ ಶೀಟರ್ ಬೆತ್ತನಗೆರೆ ಮಂಜನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರುವ ಘಟನೆ ನೆಲಮಂಗಲ ಸಮೀಪದ ಬೆತ್ತನಗೆರೆ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಮಂಜನ ತಂದೆ ಹನುಮಂತರಾಯಪ್ಪ ಹಾಗೂ ತಾಯಿ ಕುಸುಮ ಮನೆಯಲ್ಲಿದ್ದ ವೇಳೆ ದಾಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ನಿನ್ನೆ ಸಂಜೆ ಮನೆ ಬಳಿ ಕಾರಿನಲ್ಲಿ ಬಂದವರು ನಿನ್ನ ಮಗನನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಂತರ ತಡ ರಾತ್ರಿ ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ' ಎಂದು ಮಂಜನ ತಂದೆ ಹನುಮಂತರಾಯಪ್ಪ ತಿಳಿಸಿದ್ದಾರೆ.
ಯಶವಂತಪುರ ಆಟೋ ಸ್ವಾಮಿ ಎಂಬುವನಿಂದ ಕೃತ್ಯ ನಡೆದಿದ್ದು ಎನ್ನಲಾಗಿದ್ದು, ಹಳೆ ವೈಶಮ್ಯದ ಹಿನ್ನಲೆ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.