
ಭುವನೇಶ್ವರ್ : ಒಡಿಶಾದ ಭುವನೇಶ್ವರದಲ್ಲಿ 2 ಪ್ರತ್ಯೇಕ ಬಾಂಬ್ ದಾಳಿ ಪ್ರಕರಣಗಳು ನಡೆದಿವೆ.
ಬಿಜು ಜನತಾ ದಳ ಹಾಗೂ ಬಿಜೆಪಿ ಎಂಎಲ್ ಎ ಅಭ್ಯರ್ಥಿಗಳ ವಾಹನಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ. ಅನಂತ್ ನಾರಾಯಣ ಜೆನಾ ಮತ್ತು ಜಗನ್ನಾಥ್ ಪ್ರಧಾನ್ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ.
ಬಾಂಬ್ ದಾಳಿಯಲ್ಲಿ ಇಬ್ಬರು ಮುಖಂಡರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಕ್ಷದ ಕಚೇರಿಗಳ ಮುಂದೆಯೇ ದಾಳಿ ನಡೆದಿದೆ.
ಬಿಜೆಪಿ ಮುಖಂಡ ಜಗನ್ನಾಥ್ ಪ್ರಧಾನ್ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿ ಮಾಡಿ ವಾಪಸಾಗುತ್ತಿದ್ದರು. ಈ ವೇಳೆ ಅವರು ಆಗಮಿಸುತ್ತಿದ್ದ ಕಾರ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಮೂರನೇ ಬಾರಿಗೆ ಜಗನ್ನಾಥ್ ಮೇಲೆ ಈ ರೀತಿ ದಾಳಿ ನಡೆದಿದೆ. ಈ ಘಟನೆ ಸಂಬಂಧ ದೂರು ನೀಡಿದ್ದು, ಹೆಚ್ಚಿನ ತನಿಖೆಗೆ ಆಗ್ರಹಿಸಲಾಗಿದೆ.
ಬಿಜೆಪಿ ಮುಖಂಡರು ಈ ಬಗ್ಗೆ ಚುನಾವಣಾ ಆಯುಕ್ತರಿಗೆ ದೂರಿದ್ದು,ಬಿಜೆಪಿ ಮುಖಂಡರಿಂದ ಈ ಕೃತ್ಯ ನಡೆದಿದ್ದಾಗಿ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.