
ಬೆಂಗಳೂರು : ಕರ್ನಾಟಕ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿಗೆ ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಪದೋನ್ನತಿ ನೀಡಿ ಕೇಂದ್ರ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.
ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರನ್ನು ಗುವಾಹಟಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನೇಮಕ ಮಾಡಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಕೊಲಿಜಿಯಂ ಅ.9ರಂದು ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಕೇಂದ್ರ ಸರ್ಕಾರವು ಆ ಶಿಫಾರಸಿಗೆ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸಿದೆ.
ಎ.ಎಸ್.ಬೋಪಣ್ಣ ಅವರು 1959ರ ಮೇ 20ರಂದು ಜನಿಸಿದ್ದು, 1984ರಲ್ಲಿ ವಕೀಲಿಕೆ ಆರಂಭಿಸಿದ್ದರು. ಸಿವಿಲ್, ಸಾಂವಿಧಾನಿಕ ಮತ್ತು ಕಂಪನಿ ವ್ಯಾಜ್ಯ ಮತ್ತು ಸೇವಾ ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಅವರ ಸೇವಾ ಅನುಭವ ಪರಿಗಣಿಸಿ 2006ರಲ್ಲಿ ಅವರನ್ನು ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳನ್ನಾಗಿ ನೇಮಿಸಲಾಗಿತ್ತು. 2007ರಲ್ಲಿ ಅವರ ಸೇವೆ ಕಾಯಂ ಮಾಡಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.