
ಅಖ್ನೂರ್, ಜಮ್ಮು ಮತ್ತು ಕಾಶ್ಮೀರ (ಅ.06): ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಪ್ರತಿದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದ ಅಖ್ನೂರ್ ಸೆಕ್ಟರ್ ನಿವಾಸಿಗಳು ಮನೆಗಳನ್ನು ತೊರೆಯುತ್ತಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಜೀವಭಯ, ಸುರಕ್ಷತೆ ಹಾಗೂ ಇತರೆ ಮೂಲಭೂತ ಅವಶ್ಯಕತೆಗಳ ಅಲಭ್ಯತೆಯಿಂದಾಗಿ ಗ್ರಾಮಸ್ಥರು ಮನೆಗಳನ್ನು ತೊರೆದು ಬೇರೆಡೆಗೆ ವಲಸೆ ಹೋಗುತ್ತಿದ್ದಾರೆ ಎನ್ನಲಾಗಿದೆ.
ಯುದ್ಧದಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮನೆ-ಮಠ, ವ್ಯವಸಾಯ ಹಾಗೂ ಜಾನುವಾರುಗಳು ಎಲ್ಲವನ್ನೂ ಅಲ್ಲೇ ಬಿಟ್ಟು ಊರನ್ನು ತೊರಯುತ್ತಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಭಾರತೀಯ ಸೇನೆಯು ನಡೆಸಿದ ಸರ್ಜಿಕಲ್ ದಾಳಿಯ ಬಳಿಕ ಪಾಕಿಸ್ತಾನವು ಸತತವಾಗಿ ಕದನ ವಿರಾಮವನ್ನು ಉಲ್ಲಂಘಿಸುತ್ತಿದೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.