ಅಯೋಧ್ಯೆ ರಾಮನ ಜನ್ಮಸ್ಥಾನ ಅಂತಾ ಇಬ್ರೂ ಹೇಳ್ತಾರೆ: ಸುಪ್ರೀಂ!

Published : Aug 09, 2019, 07:53 PM IST
ಅಯೋಧ್ಯೆ ರಾಮನ ಜನ್ಮಸ್ಥಾನ ಅಂತಾ ಇಬ್ರೂ ಹೇಳ್ತಾರೆ: ಸುಪ್ರೀಂ!

ಸಾರಾಂಶ

ಅಯೋಧ್ಯೆ ರಾಮನ ಜನ್ಮಸ್ಥಾನ ಎಂಬುದು ನಿರ್ವಿವಾದಿತ|  ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮ ಭೂಮಿ-ಬಾಬರಿ ಮಸೀದಿ ಪ್ರಕರಣ| ‘ಎರಡೂ ಪಕ್ಷಗಳ ಅರ್ಜಿದಾರರು ಅಯೋಧ್ಯೆ ರಾಮನ ಜನ್ಮಸ್ಥಾನ ಎಂದು ಒಪ್ಪುತ್ತಾರೆ’| ರಾಮ್ ಲಲ್ಲಾ ಪರ ವಕೀಲ ಕೆ. ಪರಾಸರನ್ ಸುಪ್ರೀಂಕೋರ್ಟ್’ಗೆ ಮಾಹಿತಿ|

ನವದೆಹಲಿ(ಆ.09): ಅಯೋಧ್ಯೆಯ ವಿವಾದಾತ್ಮಕ ರಾಮಜನ್ಮ ಭೂಮಿ-ಬಾಬರಿ ಮಸೀದಿಯ ಎರಡೂ ಪಕ್ಷಗಳ ಅರ್ಜಿದಾರರು, ಅಯೋಧ್ಯೆಯನ್ನು ರಾಮನ ಜನ್ಮಸ್ಥಳ ಎಂದು ಒಪ್ಪುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ರಾಮ್ ಲಲ್ಲಾ ಪರ ವಕೀಲ ಕೆ. ಪರಾಸರನ್, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ರಂಜನ್ ಗೋಗೊಯ್ ನೇತೃತ್ವದ ಪಂಚ ಪೀಠಕ್ಕೆ ಇದನ್ನು ರಾಮನ ಜನ್ಮಸ್ಥಳ ಎಂದು ಅರ್ಥೈಸಬಹುದು ಎಂದು ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ವಿವಾದಿತ 2.77 ಎಕರೆ ಭೂಮಿಯನ್ನು ಮೂರು ಭಾಗಗಳಾಗಿ ವಿಂಗಡಿಸಿ 2010ರ ಸೆಪ್ಟೆಂಬರ್ 30ರಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ಬಗ್ಗೆ ಪರಾಸರನ್ ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ