ಇಯರ್ ಫೋನ್ ಮೋಹದಿಂದಾಗಿ ಪ್ರಾಣವನ್ನೇ ಕಳೆದುಕೊಂಡ ಯುವಕ!

Published : Oct 04, 2016, 09:50 PM ISTUpdated : Apr 11, 2018, 12:49 PM IST
ಇಯರ್ ಫೋನ್ ಮೋಹದಿಂದಾಗಿ ಪ್ರಾಣವನ್ನೇ ಕಳೆದುಕೊಂಡ ಯುವಕ!

ಸಾರಾಂಶ

ಉಡುಪಿ(ಅ.05): ಏಕಾಂಗಿ ಹೋಗುವಾಗ ಇಯರ್ ಫೋನ್ ಹಾಕಿಕೊಂಡು ಹಾಡು ಕೇಳುವ ಅಭ್ಯಾಸ ಇದೆಯಾ, ಹಾಗಾದ್ರೆ ಎಚ್ಚರ! ಮೊಬೈಲ್ ಹಾಡಿನ ಗುಂಗಿನಲ್ಲಿ ಜಗತ್ತನ್ನೇ ತೊರೆದ ಯುವಕನ ಕಥೆ ಇದು.

ಜಗತ್ ಹೆಗ್ಡೆ, ಇಂಜಿನಿಯರಿಂ​ಗ್ ಮುಗಿಸಿ ಬೆಂಗಳೂರಿನ ಪ್ರತಿಷ್ಟಿತ ಕಂಪೆನಿಯಲ್ಲಿ ತಿಂಗಳ ಹಿಂದಷ್ಟೇ ಕೆಲಸ ಪಡೆದಿದ್ದ. ಪ್ರೀತಿಯ ಅಜ್ಜಿಯನ್ನು ನವರಾತ್ರಿ ಪೂಜೆಗೆ ಅಂತ ಉಡುಪಿಯ ಕುಂದಾಪುರದ ಕುಂದ ಬಾರಂದಾಡಿಗೆ ಕರಕೊಂಡು ಬಂದಿದ್ದ. ಈತನಿಗೆ ಕಿವಿಗೆ ಇಯರ್ ಫೋನ್ ಹಾಕಿಕೊಂಡು ಮೆಲೋಡಿಯಸ್ ಸಾಂಗ್ ಕೇಳುತ್ತಾ ವಾಕ್ ಮಾಡುವ ಹುಚ್ಚು.

ನಿನ್ನೆಯೂ ಇದೇ ರೀತಿ ರೈಲ್ವೇ ಹಳಿ ಪಕ್ಕ ಕಿವಿಗೆ ಇಯರ್ ಫೋನ್ ಹಾಕಿಕೊಂಡು ಹಾಡು ಕೇಳಿಕೊಂಡು  ಹೋಗಿದ್ದಾನೆ. ಈ ವೇಳೆ ಹಿಂದಿನಿಂದ ರೈಲು ಬಂದಿದೆ. ರೈಲು ಎಷ್ಟೇ ಹಾರನ್ ಮಾಡಿದರೂ ಈತನಿಗೆ ಅರಿವಿಗೆ ಬಂದಿಲ್ಲ. ಕೊನೆಗೆ ರೈಲು ಇವನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಜಗತ್ ಓರ್ವ ಪ್ರತಿಭಾವಂತ ಹುಡುಗ. ಹೈಕೋಟ್ ನಿವೃತ್ತ ನ್ಯಾಯಮೂರ್ತಿ ಜಗನ್ನಾಥ್ ಹೆಗ್ಡೆ ಈತನ ಅಜ್ಜ. ಮನೆಯವರೆಲ್ಲಾ ಬೇರೆ ಬೇರೆ ಊರುಗಳಲ್ಲಿ ನೆಲೆಸಿದ್ದು, ಈತ ಮನ ಸಂತೋಷಕ್ಕೆ ಕುಂದಬಾರಂದಾಡಿಗೆ ಬರುತ್ತಿದ್ದರು. ಇದೀಗ ಈತನ ಸಾವು ಮನೆಯವರ ಸಂತೋಷವನ್ನೇ ಕಸಿದುಬಿಟ್ಟಿದೆ..
ಈ ಘಟನೆಯನ್ನಾದರೂ ನೋಡಿ ಇನ್ನು ಮುಂದೆ ರಸ್ತೆಯಲ್ಲೋ, ಇಲ್ಲ ರೈಲ್ವೆ ಹಳಿಯ ಪಕ್ಕದಲ್ಲೋ ನಡೆದು ಹೋಗುವಾಗ ಇಯರ್ ಫೋನ್ ಬಳಸಬೇಡಿ. ಈ ದುರಂತ ಯುವ ಜನಾಂಗಕ್ಕೆ ಒಂದು ಎಚ್ಚರಿಕೆಯ ಸಂದೇಶವೂ ಹೌದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?