
ದಾವಣಗೆರೆ(ಅ.27): ದಾವಣಗೆರೆ ಜಗಳೂರು ತಾಲೂಕಿನ ಕಣ್ವಕುಪ್ಪೆ ಗವಿಮಠದಲ್ಲಿ ಯುವಕನೊಬ್ಬ ಸ್ವಾಮೀಜಿ ಕುಳಿತುಕೊಳ್ಳುವ ಆಸನದ ಮೇಲೆ ಕೂತು ಉದ್ದಟತನ ಮೆರೆದಿದ್ದಾನೆ.
ಬಿಳಿಚೋಡು ಗ್ರಾಮದಲ್ಲಿ ಹಾರಿಸ್ ಖಾನ್ ಕಣ್ವಕುಪ್ಪೆ ಗವಿಮಠದಲ್ಲಿ ಯಾರು ಇಲ್ಲದ ವೇಳೆ ಸ್ವಾಮೀಜಿ ಕೂರುವ ಆಸನದ ಮೇಲೆ ಕೂತು ಸೆಲ್ಫಿ ತೆಗೆದುಕೊಂಡಿದ್ದಾನೆ. ಅಲ್ಲದೇ ಈ ಫೋಟೋವನ್ನು ಫೇಸ್ಬುಕ್ನಲ್ಲಿ ಅಪಲೋಡ್ ಮಾಡಿ ಉದ್ಧಟತನ ಮೆರೆದಿದ್ದಾನೆ. ಸ್ಟೇಟಸ್'ನಲ್ಲಿ ಆಯುಧಗಳು ಶೋಕಿಗಾಗಿ ಅಷ್ಟೇ, ಹೆದರಿಸಲು ನನ್ನ ಹೆಸರು ಸಾಕು ಎಂದು ಬರೆದುಕೊಂಡಿದ್ದಾನೆ.
ನಾಲ್ವಡಿ ಶಾಂತಲಿಂಗ ಸ್ವಾಮೀಜಿಗಳು ಉತ್ತರಾಖಖಂಡ್ನ ಕೇದಾರನಾಥ ಕ್ಷೇತ್ರಕ್ಕೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಭಕ್ತರು ಹಾರಿಸ್ ಖಾನ್ನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗಾಯಗೊಂಡ ಹಾರಿಸ್ ಖಾನ್ ಜಗಳೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಘಟನೆಗೆ ಜಗಳೂರು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಡಿಸಿದ್ದು ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಗಳೂರು ಪಟ್ಟಣ ಇದೀಗ ಬೂದಿಮುಚ್ಚಿದ ಕೆಂಡದಂತಿದ್ದು ಬಿಗಿಪೊಲೀಸ್ ಬಂದೋಬಸ್ತ್ ಹಾಕಲಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.