ಧಾರವಾಡ: ಶವಸಂಸ್ಕಾರದ ವೇಳೆ ಉಸಿರಾಡಿದ ಬಾಲಕ

Published : Feb 19, 2017, 06:50 AM ISTUpdated : Apr 11, 2018, 12:39 PM IST
ಧಾರವಾಡ: ಶವಸಂಸ್ಕಾರದ ವೇಳೆ ಉಸಿರಾಡಿದ ಬಾಲಕ

ಸಾರಾಂಶ

ಬಾಲಕನ ಉಸಿರಾಟ ಮತ್ತು ನಾಡಿ ಮಿಡಿತ ನಿಂತಿರುವುದನ್ನು ಗಮನಿಸಿದ ಪಾಲಕರು ಆತ ಮೃತಪಟ್ಟಿದ್ದಾನೆಂದು ಭಾವಿಸಿದ್ದರು. ಇನ್ನು ಆತನ ಅಂತ್ಯ ಸಂಸ್ಕಾರಕ್ಕೆ ಮನಗುಂಡಿ ಗ್ರಾಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಹುಬ್ಬಳ್ಳಿ (ಫೆ.19): ಮೃತಪಟ್ಟಿದ್ದಾನೆಂದು ವೈದ್ಯರೇ ಕೈಚೆಲ್ಲಿದ್ದ ಬಾಲಕ, ಶವಸಂಸ್ಕಾರಕ್ಕೆ ಹೊತ್ತೊಯ್ಯುವಾಗ ಉಸಿರಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಹುಬ್ಬಳ್ಳಿಯ ಮನೆಯೊಂದರಲ್ಲಿ ಗಾರೆ ಕೆಲಸ ಮಾಡುವಾಗ 16 ವರ್ಷದ ಕುಮಾರ್ ಮರಡಿಗೆ ಬೀದಿ ನಾಯಿ ಕಚ್ಚಿತ್ತು. ಸೂಕ್ತ ಚಿಕಿತ್ಸೆ ಲಭಿಸದ ಕಾರಣ ಬಾಲಕ ಮೂರ್ಛೆ ಹೋಗಿದ್ದ.

ಆ ನಂತರ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಬಾಲಕನ ದೇಹ ಯಾವ ಚಿಕಿತ್ಸೆಗೂ ಸ್ಪಂದಿಸಿರಲಿಲ್ಲ. ಹೀಗಾಗಿ ವೈದ್ಯರು ಕುಮಾರನನ್ನು ಮನೆಗೆ ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದರು.

ಬಾಲಕನ ಉಸಿರಾಟ ಮತ್ತು ನಾಡಿ ಮಿಡಿತ ನಿಂತಿರುವುದನ್ನು ಗಮನಿಸಿದ ಪಾಲಕರು ಆತ ಮೃತಪಟ್ಟಿದ್ದಾನೆಂದು ಭಾವಿಸಿದ್ದರು. ಇನ್ನು ಆತನ ಅಂತ್ಯ ಸಂಸ್ಕಾರಕ್ಕೆ ಮನಗುಂಡಿ ಗ್ರಾಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಎಲ್ಲಾ ಸಿದ್ಧತೆಗಳಾಗಿ ದೇಹವನ್ನು ಸ್ಮಶಾನಕ್ಕೆ ಸಾಗಿಸುವಾಗ  ಕುಮಾರ್ ಮತ್ತೆ  ಉಸಿರಾಟ ಆರಂಭಿಸಿದ್ದಾನೆ. ಇದನ್ನು ಗಮನಿಸಿದ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಕುಮಾರ್ ನನ್ನು ಹುಬ್ಬಳ್ಳಿಯ ಸುಚಿರಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.  ಇನ್ನು ಆಸ್ಪತ್ರೆಯ ವೈದ್ಯರು ಬಾಲಕನಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ