ಉಚಿತ ಚಿಕಿತ್ಸೆ ಕೊಡಿಸಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಿದ ಕ್ಯಾನ್ಸರ್ ಪೀಡಿತ ಬಾಲಕ

Published : Jun 21, 2019, 09:27 AM ISTUpdated : Jun 21, 2019, 09:36 AM IST
ಉಚಿತ ಚಿಕಿತ್ಸೆ ಕೊಡಿಸಿದ್ದಕ್ಕೆ  ಸಿಎಂಗೆ ಥ್ಯಾಂಕ್ಸ್ ಹೇಳಿದ ಕ್ಯಾನ್ಸರ್ ಪೀಡಿತ ಬಾಲಕ

ಸಾರಾಂಶ

ಪುಟ್ಟ ಬಾಲಕನೋರ್ವ ಸಿಎಂ ಕಾರ್ಯಕ್ರಮದ ವೇಳೆ ವೇದಿಕೆ ಏರಿ ಬಂದು ಥ್ಯಾಂಕ್ಸ್ ಹೇಳಿದ್ದಾನೆ. 

ಬೆಂಗಳೂರು [ಜೂ.21]  : ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದಿಂದ ನಿರ್ಮಿಸಿರುವ ಸುಸಜ್ಜಿತ ಐದು ಶಸ್ತ್ರ ಚಿಕಿತ್ಸಾ ಕೊಠಡಿಗಳನ್ನು ಗುರುವಾರ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಉದ್ಘಾಟಿಸಿದರು. 

 ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಮೈಸೂರು ಮೂಲದ ಸುಮಾರು 9 ವರ್ಷದ ಬಾಲಕ ಸೃಜನ್ ಹಾಗೂ ಆತನ ತಂದೆ ಸೋಮಶೇಖರ್ ವೇದಿಕೆ ಮೇಲೇರಿ ಸಿಎಂ ಕುಮಾರಸ್ವಾಮಿ ಅವರಿಗೆ ಧನ್ಯವಾದ ಅರ್ಪಿಸಿದರು. 

ಈ ವೇಳೆ ಸೃಜನ್ ಆರೋಗ್ಯವನ್ನು ಸಿಎಂ ವಿಚಾರಿಸಿದರು. ಸೃಜನ್ 16 ತಿಂಗಳ ಮಗುವಾಗಿದ್ದಾಗ ರಕ್ತದ ಕ್ಯಾನ್ಸರ್‌ಗೆ ತುತ್ತಾಗಿದ್ದ. ಅಂದು ಚಿಕಿತ್ಸೆಗೆ 30 ಲಕ್ಷ ರು. ವೆಚ್ಚವಾಗುವುದಾಗಿ ಖಾಸಗಿ ಆಸ್ಪತ್ರೆಗಳು ಹೇಳುತ್ತಿರುವುದಾಗಿ ಸಹಾಯ ಕೋರಿ ಸೋಮಶೇಖರ್ ತಮ್ಮ ಬಳಿ ಬಂದಿದ್ದರು. 

ಕಿದ್ವಾಯಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿ, ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದೆ. ಇದೀಗ ಸೃಜನ್ ಬಹುತೇಕ ಗುಣಮುಖನಾಗಿದ್ದಾನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು