ಆರಂಭವಾಯ್ತು ರೋಗಗಳ ಹಾವಳಿ : ಡೆಂಗ್ಯೂಗೆ ಬಾಲಕ ಬಲಿ

Published : Jul 05, 2018, 12:59 PM IST
ಆರಂಭವಾಯ್ತು ರೋಗಗಳ ಹಾವಳಿ : ಡೆಂಗ್ಯೂಗೆ ಬಾಲಕ ಬಲಿ

ಸಾರಾಂಶ

ಮುಂಗಾರು ಆರಂಭವಾಗುತ್ತಿದ್ದಂತೆ ರೋಗಗಳ ಹಾವಳಿಯೂ ಕೂಡ ಆರಂಭವಾಗುತ್ತದೆ.  ಡೆಂಗ್ಯೂ ಜ್ವರದಿಂದ ಹಾವೇರಿ ಜಿಲ್ಲೆಯಲ್ಲಿ  ಬಾಲಕನೋರ್ವ ಸಾವಿಗೀಡಾಗಿದ್ದಾರೆ. 

ಹಾವೇರಿ : ಮುಂಗಾರು ಆರಂಭವಾಗುತ್ತಿದ್ದಂತೆ ರೋಗಗಳ ಹಾವಳಿಯೂ ಕೂಡ ಆರಂಭವಾಗುತ್ತದೆ.  ಡೆಂಗ್ಯೂ ಜ್ವರದಿಂದ ಹಾವೇರಿ ಜಿಲ್ಲೆಯಲ್ಲಿ  ಬಾಲಕನೋರ್ವ ಸಾವಿಗೀಡಾಗಿದ್ದಾರೆ. 

ಸವಣೂರ ತಾಲೂಕಿನ ಮಣ್ಣೂರ ಗ್ರಾಮದ ರಾಘು ಯಲ್ಲಪ್ಪ ಸಾತಣ್ಣವರ(13) ಎಂಬ ಬಾಲಕ  ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾನೆ. ಕಳೆದ 12 ದಿನದಿಂದ ಬಿಟ್ಟೂ ಬಿಡದೆ  ಜ್ವರ ಬಾಧಿಸುತ್ತಿದ್ದು,  ಬಂಕಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. 

ನಿನ್ನೆ ಮತ್ತೆ ಜ್ವರ ಉಲ್ಬಣಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು. ಆದರೂ ಕೂಡ ಜ್ವರ ನಿಯಂತ್ರಣಕ್ಕೆ ಬಾರದೆ ನಿನ್ನೆ ರಾತ್ರಿ ಬಾಲಕ ಅಸು ನೀಗಿದ್ದಾನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟ್ರಂಪ್‌ ತೆರಿಗೆ ಶಾಕ್‌ಗೆ ಚೀನಾ ದಾಖಲೆಯ ತಿರುಗೇಟು
‘ಋತುಚಕ್ರ ರಜೆ’ಗೆ ತಡೆ ನೀಡಿ ಹಿಂಪಡೆದ ಹೈಕೋರ್ಟ್‌