
ಬೆಂಗಳೂರು(ಜು.29): ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ರಸ್ತೆಯ ರಾಗಿಹಳ್ಳಿ ಗ್ರಾಮದ ರಸ್ತೆಯಲ್ಲಿ ಕೆಲದಿನಗಳಿಂದ ನಾಲ್ವರು ಯುವಕರು ಯುವತಿಯರಿಗೆ ಹಿಂಭಾಲಿಸಿಕೊಂಡು ಚುಡಾಯಿಸುತ್ತಿದ್ದರು. ಈ ವಿಚಾರ ತಿಳಿದ ಯುವತಿಯರ ಪೋಷಕರು ಆ ಯುವಕರಿಗಾಗಿ ಹಲವು ಬಾರಿ ಹುಡುಕಾಟ ನಡೆಸಿದ್ದಾರೆ.
ನಿನ್ನೆ ಎಂದಿನಂತೆ ಆ ಯುವಕರು ಯುವತಿಯನ್ನು ಚುಡಾಯಿಸಿದ್ದಕ್ಕೆ ಶುರು ಮಾಡಿದ್ದರು. ಯುವಕರ ಪುಂಡಾಟ ಕಂಡ ಗ್ರಾಮಸ್ಥರು ನಡು ರಸ್ತೆಯಲ್ಲಿ ಇಬ್ಬರು ಯುವಕರನ್ನು ಹಗ್ಗದಿಂದ ಕಟ್ಟಿ ಥಳಿಸುತ್ತಾ ರಾಗಿಹಳ್ಳಿ ಗ್ರಾಮದಿಂದ ಬನ್ನೇರುಘಟ್ಟ ಪೊಲೀಸ್ ಠಾಣೆವರೆಗೂ ಥಳಿಸಿಕೊಂಡು ಬಂದು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.