
ನವದೆಹಲಿ: ಲಂಚ ಪಡೆದವರಿಗೆ ಶಿಕ್ಷೆ ನೀಡುವಂತೆ, ಲಂಚ ನೀಡಿದವರಿಗೂ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ ನೀಡಬಹುದಾದ ಕಾನೂನು ಅಧಿಕೃತವಾಗಿ ಜಾರಿಗೆ ಬಂದಿದೆ. ಇತ್ತೀಚೆಗೆ ಸಂಸತ್ತಿನ ಅನುಮೋದನೆ ಪಡೆದಿದ್ದ ಮಸೂದೆಗೆ ಇದೀಗ ರಾಷ್ಟ್ರಪತಿ ಕೋವಿಂದ್ ಸಹಿಹಾಕಿದ್ದು, ಅದು ಕಾಯ್ದೆ ಸ್ವರೂಪ ಪಡೆದುಕೊಂಡಿದೆ.
ಭ್ರಷ್ಟಾಚಾರ ನಿಗ್ರಹ (ತಿದ್ದುಪಡಿ) 1988 ರ ಕಾಯ್ದೆ ಅನ್ವಯ ಇನ್ನು ಮುಂದೆ ಲಂಚ ಸ್ವೀಕರಿಸಿದಷ್ಟೇ, ಲಂಚ ನೀಡುವುದು ಕೂಡಾ ಅಪರಾಧವಾಗಲಿದೆ. ಇತ್ತೀಚೆಗೆ ಸಂಸತ್ತಿನ ಅನುಮೋದನೆ ಪಡೆದಿದ್ದ ಮಸೂದೆಗೆ ಇದೀಗ ರಾಷ್ಟ್ರಪತಿ ಕೋವಿಂದ್ ಸಹಿಹಾಕಿದ್ದು, ಅದು ಕಾಯ್ದೆ ಸ್ವರೂಪ ಪಡೆದುಕೊಂಡಿದೆ.
ಇದೇ ವೇಳೆ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಬ್ಯಾಂಕ್ರ್ ಗಳನ್ನು ವಿಚಾರಣೆಗೆ ಗುರಿಪಡಿಸುವ ಮುನ್ನ ಸರ್ಕಾರದಿಂದ ಪೂರ್ವಾನುಮತಿ ಪಡೆದುಕೊಳ್ಳುವುದನ್ನು ಹೊಸ ಕಾಯ್ದೆಯಡಿ ಕಡ್ಡಾಯಗೊಳಿಸಲಾಗಿದೆ. ಅಧಿಕಾರದಲ್ಲಿದ್ದಾಗ ಕೈಗೊಂಡ ನಿರ್ಣಯಗಳಿಗೆ, ಯಾರನ್ನೂ ಮುಂದಿನ ದಿನಗಳಲ್ಲಿ ಯಾರೂ ಬಲಿ ಪಶು ಆಗಬಾರದು ಎಂಬ ಕಾರಣಕ್ಕೆ ಸರ್ಕಾರ ಈ ರೀತಿಯ ರಕ್ಷಣೆ ಒದಗಿಸಿದೆ. ಈ ನಿಯಮ ನಿವೃತ್ತ ಅಧಿಕಾರಿಗಳು, ಜನಪ್ರತಿನಿಧಿಗಳಿಗೂ ಅನ್ವಯವಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.