ಸಪ್ತಪದಿ ತುಳಿಯಬೇಕಿದ್ದ ವಧು-ವರರಿಬ್ಬರೂ ಮಸಣಕ್ಕೆ; ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲೀಗ ಸೂತಕದ ಛಾಯೆ

Published : Jan 24, 2018, 05:15 PM ISTUpdated : Apr 11, 2018, 12:54 PM IST
ಸಪ್ತಪದಿ ತುಳಿಯಬೇಕಿದ್ದ ವಧು-ವರರಿಬ್ಬರೂ ಮಸಣಕ್ಕೆ; ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲೀಗ ಸೂತಕದ ಛಾಯೆ

ಸಾರಾಂಶ

ವಿವಾಹ ಪೂರ್ವ ಫೋಟೋ ಶೂಟ್'ಗೆ ತೆರಳುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು, ಭೀಕರ ರಸ್ತೆ ಅಪಘಾತದಲ್ಲಿ ವಧು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ವರ ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಹಸೆಮಣೆ ಏರಬೇಕಾಗಿದ್ದ ವಧು ವರರಿಬ್ಬರೂ ಮಸಣ ಸೇರಿದ್ದಾರೆ. ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲೀಗ ಸೂತಕದ  ಛಾಯೆ ಆವರಿಸಿದೆ.

ಹಾಸನ (ಜ.24): ವಿವಾಹ ಪೂರ್ವ ಫೋಟೋ ಶೂಟ್'ಗೆ ತೆರಳುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು, ಭೀಕರ ರಸ್ತೆ ಅಪಘಾತದಲ್ಲಿ ವಧು ಮೃತಪಟ್ಟಿದ್ದು, ಗಂಭೀರ ಗಾಯಗೊಂಡಿದ್ದ ವರ ಕೂಡಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಹಸೆಮಣೆ ಏರಬೇಕಾಗಿದ್ದ ವಧು ವರರಿಬ್ಬರೂ ಮಸಣ ಸೇರಿದ್ದಾರೆ. ಸಂಭ್ರಮ ಮನೆ ಮಾಡಬೇಕಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.

ತುಮಕೂರು ಜಿಲ್ಲೆ ಗುಬ್ಬಿಯ ರಾಧಿಕಾ- ಸುಪ್ರೀತ್ ನಡುವೆ ವಿವಾಹ ನಿಶ್ಚಯಗೊಂಡಿತ್ತು. ಇವರಿಬ್ಬರೂ  ಫೋಟೋ ಶೂಟನ್ನು ಹಾಸನದ ಶೆಟ್ಟಿಹಳ್ಳಿ ಚರ್ಚ್'ನಲ್ಲಿ ಮುಗಿಸಿ ಮಂಜ್ರಾಬಾದ್ ಕೋರ್ಟ್ ಕಡೆ ತೆರಳುತ್ತಿದ್ದರು. ಈ ವೇಳೆ ಆಲೂರಿನ ಪಾಳ್ಯದಲ್ಲಿ ಅಸ್ವಸ್ಥ ಮಹಿಳೆಗೆ ಕಾರು ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಾದಚಾರಿ ಅಸ್ವಸ್ಥ ಮಹಿಳೆ ಸಾವನ್ನಪ್ಪಿದ್ದಾಳೆ. ಕಾರಿನಲ್ಲಿದ್ದ ರಾಧಿಕಾ ಸಹ ಸಾವನ್ನಪ್ಪಿದ್ದು, ರಾಧಿಕಾ ತಾಯಿ, ಕ್ಯಾಮರಾಮನ್'ಗಳು ಸೇರಿ ಮೂವರ ಸ್ಥಿತಿ ಗಂಭೀರವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಬುಲಾವ್ ನೀಡಿದ್ರೂ ಬಾರದ ಅಧಿಕಾರಿ; ಐಎಎಸ್ ಪಂಕಜ್ ಕುಮಾರ್ ಪಾಂಡೆಗೆ ನೋಟೀಸ್?
ಮಾದಪ್ಪನ ಭಕ್ತರ ಮೇಲೆ ಚಿರತೆ ದಾಳಿ: ಪ್ರಕರಣ ಮರುಕಳಿಸದಂತೆ ಅಧಿಕಾರಿಗಳಿಗೆ ಸಚಿವ ವೆಂಕಟೇಶ್ ಸೂಚನೆ