ಭಾರೀ ಮಳೆಗೆ ಕೊಚ್ಚಿ ಹೋದ ಸೇತುವೆ; ನೀರಿನಲ್ಲೇ ಶವ ಹೊತ್ತೊಯ್ದ ಜನ!

Published : Jul 18, 2019, 09:03 AM IST
ಭಾರೀ ಮಳೆಗೆ ಕೊಚ್ಚಿ ಹೋದ ಸೇತುವೆ; ನೀರಿನಲ್ಲೇ ಶವ ಹೊತ್ತೊಯ್ದ ಜನ!

ಸಾರಾಂಶ

ಉತ್ತರ ಕನ್ನಡದಲ್ಲಿ ಭಾರೀ ಮಳೆ | ಸೇತುವೆ ಕುಸಿದಿದ್ದರಿಂದ ನಡುಮಟ್ಟದ ನೀರಿನಲ್ಲಿ ಶವವನ್ನು ಹೊತ್ತೊಯ್ದ ಜನ | 

ಅಂಕೋಲಾ (ಜು. 18): ಸೇತುವೆ ಕುಸಿದ ಹಿನ್ನೆಲೆಯಲ್ಲಿ ಶವಸಂಸ್ಕಾರಕ್ಕೆ ಮೃತದೇಹವನ್ನು ನೀರಿನಲ್ಲಿಯೇ ಸಾಗಿಸಿದ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಕೇಣಿಯ ಗಾಂವಕರವಾಡಾದಲ್ಲಿ ಈ ವರ್ಷವೂ ನಡೆದಿದೆ.

ಸ್ಥಳೀಯ ನಿವಾಸಿ 80 ವರ್ಷದ ರಾಮಾ ನಾರಾಯಣ ಗಾಂವಕರ ಎನ್ನುವ ವೃದ್ಧ ಬುಧವಾರ ಬೆಳಗ್ಗೆ ಮೃತಪಟ್ಟಿದ್ದರು. ಗ್ರಾಮದ ರುದ್ರಭೂಮಿಗೆ ಸಾಗುವ ಕಾಲು ಸೇತುವೆಯೊಂದು ಮಳೆ ನೀರಿಗೆ ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಮೃತ ದೇಹವನ್ನು ಎದೆಯೆತ್ತರದ ನೀರಿನಲ್ಲೇ ಹೊತ್ತು ನಡೆದುಕೊಂಡೆ ಹೋಗಿ ಸಾಗಿಸಲಾಯಿತು.

ಶವವನ್ನು ಸುಡಲು ಬೇಕಾಗಿದ್ದ ಕಟ್ಟಿಗೆಯನ್ನೂ ಸಂಬಂಧಿಗಳು ನೀರಿನಲ್ಲಿ ಮುಳುಗಿಕೊಂಡೇ ಸಾಗಿಸಿದ್ದಾರೆ. 2 ವರ್ಷದ ಹಿಂದೆ ರುದ್ರಭೂಮಿಗೆ ಸಾಗಲು ಕಾಲು ಸೇತುವೆಯನ್ನು ನಿರ್ಮಿಸಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದಾಗಿ ಕಳೆದ ವರ್ಷದ ಮಳೆಗೆ ಅದು ಕುಸಿದಿತ್ತು. ಕಳೆದ ವರ್ಷವೂ ಇಲ್ಲಿ ವೃದ್ಧೆಯೊಬ್ಬರು ಮೃತಪಟ್ಟಾಗ ಇದೇ ರೀತಿ ಶವವನ್ನು ನೀರಿನಲ್ಲಿಯೇ ಸಾಗಿಸಿ ಶವ ಸಂಸ್ಕಾರ ನಡೆಸಲಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌