ಕೆಪಿಸಿಸಿ ಮಾಧ್ಯಮ ವಿಭಾಗವನ್ನು ಮತ್ತಷ್ಟು ಸದೃಢಗೊಳಿಸುವಂತೆ ಬ್ರಿಜೇಶ್ ಕಾಳಪ್ಪ ಅವರಿಗೆ ಸಲಹೆ ನೀಡಿದ್ದಾರೆ.
ಬೆಂಗಳೂರು(ಮಾ.04): ಕಾಂಗ್ರೆಸ್ ಮುಖಂಡ ಬ್ರಿಜೇಶ್ ಕಾಳಪ್ಪ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಸಂಚಾಲಕರನ್ನಾಗಿ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಆದೇಶ ಮಾಡಿದ್ದಾರೆ.
ಶನಿವಾರ ಆದೇಶ ಹೊರಡಿಸಿರುವ ಅವರು ಕೆಪಿಸಿಸಿ ಮಾಧ್ಯಮ ವಿಭಾಗವನ್ನು ಮತ್ತಷ್ಟು ಸದೃಢಗೊಳಿಸುವಂತೆ ಬ್ರಿಜೇಶ್ ಕಾಳಪ್ಪ ಅವರಿಗೆ ಸಲಹೆ ನೀಡಿದ್ದಾರೆ.