ರಸ್ತೆ ಬದಿ ಮೂತ್ರ ವಿಸರ್ಜಿಸ್ತೀರಾ? ಉಗುಳುತ್ತೀರಾ? ನೀವು ಈ ಸುದ್ದಿ ಓದಲೇಬೇಕು!

Published : Feb 14, 2019, 01:21 PM IST
ರಸ್ತೆ ಬದಿ ಮೂತ್ರ ವಿಸರ್ಜಿಸ್ತೀರಾ? ಉಗುಳುತ್ತೀರಾ? ನೀವು ಈ ಸುದ್ದಿ ಓದಲೇಬೇಕು!

ಸಾರಾಂಶ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಹಾಗೂ ಎಂಜಲು ಉಗುಳುವವರೇ ಎಚ್ಚರ. ನಿಮಗೊಂದು ಶಾಕಿಂಗ್ ಸುದ್ದಿ ಕಾದಿದೆ. ಅಷ್ಟಕ್ಕೂ ಅದೇನು ಅಂತೀರಾ? ಇಲ್ಲಿದೆ ನೋಡಿ ವಿವರ

ನವದೆಹಲಿ[ಫೆ.14]: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಹಾಗೂ ಎಂಜಲು ಉಗುಳಿದರೆ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಗುರಿಪಡಿಸುವಂತೆ ಸಂಸದೀಯ ಸಮಿತಿಯೊಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸ್ವಚ್ಛ ಭಾರತ ಮಿಷನ್‌ಗೆ ಕಾನೂನಿನ ಅಧಿಕಾರ ನೀಡಲು ಸಮಗ್ರ ಮಾದರಿಯ ಶಾಸನವೊಂದನ್ನು ರೂಪಿಸಬೇಕು. ಇದರಿಂದ ನಗರ ಪಾಲಿಕೆಗಳು ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ವಿಸರ್ಜಿಸುವ ಮತ್ತು ಎಂಜಲು ಉಗುಳಿ ಹೊಲಸು ಮಾಡುವವರನ್ನು ಶಿಕ್ಷೆಗೆ ಗುರಿಪಡಿಸಬಹುದಾಗಿದೆ ಎಂದು ದಿಲೀಪ್‌ ಕುಮಾರ್‌ ಮನಸುಖ್‌ಲಾಲ್‌ ಗಾಂಧಿ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.

ಅಲ್ಲದೇ ಮಕ್ಕಳಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಸ್ವಚ್ಛ ಭಾರತ ಯೋಜನೆಯನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಬೇಕು. ಯೋಜನೆಯನ್ನು ಕಾನೂನಾತ್ಮಕವಾಗಿ ಬಲಗೊಳಿಸಬೇಕು ಎಂದು ಸಮಿತಿ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಿರುಪತಿ ತಿಮ್ಮಪ್ಪನಿಗೆ ಅಂಗವಸ್ತ್ರದ ಮೋಸ, ಪ್ಲಾಸ್ಟಿಕ್‌ ಸಿಲ್ಕ್‌ ಕೊಟ್ಟು 55 ಕೋಟಿ ಯಾಮಾರಿಸಿದ ಕಂಪನಿ!
ರಾಷ್ಟ್ರಪತಿಗಳು ಪದಕ ನೀಡುತ್ತಿದ್ದಂತೆ ಕೊರಳಿನಿಂದ ಕಿತ್ತೆಸೆದ ಬಾಲಕ! ವೈರಲ್ ವಿಡಿಯೋ ಹಿಂದಿನ ಸತ್ಯವೇನು?