'ದೇವೇಗೌಡರ ಸೊಂಟ ಸರಿಯಿದೆ ಎಂದು ತೋರಿಸಲು 2 ಗಂಟೆ ರ್ಯಾಲಿಯಲ್ಲಿ ನಿಂತೆ'

Published : Dec 04, 2017, 05:26 PM ISTUpdated : Apr 11, 2018, 12:51 PM IST
'ದೇವೇಗೌಡರ ಸೊಂಟ ಸರಿಯಿದೆ ಎಂದು ತೋರಿಸಲು 2 ಗಂಟೆ ರ್ಯಾಲಿಯಲ್ಲಿ ನಿಂತೆ'

ಸಾರಾಂಶ

ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಒಂದು ಪ್ರಾದೇಶಿಕ ಪಕ್ಷ ಉಳಿಯಬೇಕೆ ಬೇಡವೇ ಎಂಬ ನಿರ್ಧಾರ ಮಾಡುವವರು ಜನಗಳು. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೆ ಗುಂಪು ಮಾಡಿದರು  ಎಂದು  ಕೊರಟಗೆರೆಯಲ್ಲಿ 'ಮನೆ ಮನೆಗೆ ಕುಮಾರಣ್ಣ'  ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ.

ತುಮಕೂರು (ಡಿ.04): ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಒಂದು ಪ್ರಾದೇಶಿಕ ಪಕ್ಷ ಉಳಿಯಬೇಕೆ ಬೇಡವೇ ಎಂಬ ನಿರ್ಧಾರ ಮಾಡುವವರು ಜನಗಳು. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಮೂಲೆ ಗುಂಪು ಮಾಡಿದರು  ಎಂದು  ಕೊರಟಗೆರೆಯಲ್ಲಿ 'ಮನೆ ಮನೆಗೆ ಕುಮಾರಣ್ಣ'  ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ.

ಕಷ್ಟ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನೆಗೆ ಬಂದರು. ನೀವು ಬರದಿದ್ದರೆ ನನಗೆ ಕಷ್ಟವಾಗುತ್ತದೆ.  ಮನೆಗೆ ಬಂದು ಸಹಕಾರ ಬೇಕು ಎಂದು ಮನವಿ ಮಾಡಿಕೊಂಡರು. ನಾನು ವಿಧಾನಸೌಧಕ್ಕೆ ಬಂದು 20 ವರ್ಷವಾಗಿತ್ತು.  ಜನರ ಕಷ್ಟಕ್ಕಾಗಿ ನಾನು ಹೋದೆ ಎಂದು ದೇವೇಗೌಡರು ಹೇಳಿದ್ದಾರೆ.

ಜಾತಿ ಎಲ್ಲವನ್ನು ಬಿಟ್ಟು ಕುಮಾರ ಸ್ವಾಮಿಗೆ ಅಧಿಕಾರ ಕೊಡಿ. ಬಿಜೆಪಿಗೆ ಐದು ವರ್ಷ, ಕಾಂಗ್ರೆಸ್'ಗೆ ಐದು ವರ್ಷ ಅಧಿಕಾರ ನೀಡಿದ್ದೇವೆ. ಈ ಬಾರಿ ನಿಮಗೆ ಅಧಿಕಾರ ನೀಡುತ್ತೇವೆ ಎಂದು ಜನರು ಹೇಳಿದ್ದಾರೆ.  ಕುಮಾರಸ್ವಾಮಿಗೆ ಎರಡು ಬಾರಿ ಆಪರೇಷನ್ ಆಗಿದೆ. ದೇವರ ಕೃಷೆಯಿಂದ ನಿಮ್ಮ ಮುಂದೆ ನಿಲ್ಲುವಂತಾಗಿದೆ. ರಾಜ್ಯದ ಹಿತವನ್ನು ಕಾಪಾಡಲು ನಾನು ರಾಜ್ಯಾದ್ಯಂತ ಓಡಾಡುತ್ತಿದ್ದೇನೆ.   ದಯವಿಟ್ಟು ಯುವಕರು ಕುಮಾರಣ್ಣ ಬಂದಾಗ ಪಟಾಕಿ ಹೊಡೆಯಬೇಡಿ ಅವರಿಗೆ ಆರೋಗ್ಯ ಸರಿಯಿಲ್ಲ ಎಂದು ಕಾರ್ಯಕರ್ತರಲ್ಲಿ ದೇವೇಗೌಡರು ಮನವಿ ಮಾಡಿದರು.

ಈ ಪಾರ್ಟಿ ದೇವೇಗೌಡರ ಕುಟುಂಬದ ಆಸ್ತಿಯಲ್ಲ . ಪಕ್ಷದ ಕಟ್ಟಡ ಹೋದಾಗ ಒಂಟಿಯಾಗಿ ಕುಳಿತು ಕಣ್ಣೀರಾಕಿದ್ದೇನೆ.  ಈ ಪಕ್ಷ ಅಧಿಕಾರಕ್ಕೆ ತರಬೇಕೆಂಬ ಹೆಬ್ಬಯಕೆಯಿದೆ. ನನ್ನ ಮಗನನ್ನು ಸಿಎಂ ಮಾಡಬೇಕಂಬ ಆಸೆಯಲ್ಲ. ರೈತರ ಕಣ್ಣೀರು ಒರೆಸುವ ಆಸೆಯಿದೆ.  ನಮ್ಮ‌ ಪಕ್ಷದ ಬಗ್ಗೆ ಅಪಹಾಸ್ಯ ಮಾಡುತ್ತಾರೆ. ರಾಜ್ಯದಲ್ಲಿ ಜೆಡಿಎಸ್ ಎಲ್ಲಿದೆ ಸತ್ತು ಹೋಯ್ತು ಅಂತ ಮುಖ್ಯಮಂತ್ರಿ ಹೇಳುತ್ತಾರೆ.  ಅವರು ಬಂದು ನೋಡಲಿ ಕೊರಟಗೆರೆಯಲ್ಲಿ ಈ ರೀತಿ ಸಭೆ ನಡೆದಿದ್ದು ನಾನು ನೋಡಿಲ್ಲ ಎಂದು ಗೌಡರು ತಿರುಗೇಟು ನೀಡಿದ್ದಾರೆ.  

ಕೆಪಿಸಿಸಿ ರಾಜ್ಯಾಧ್ಯಕ್ಷರು ಸೊಂಟ ಮುರಿದಿಲ್ಲ ಎಂದು ಹೇಳಿದರು. ದೇವೇಗೌಡರ ಸೊಂಟ ಸರಿಯಿದೆ ಎಂದು ತೋರಿಸಲು ಎರಡು ಗಂಟೆಗಳ ಕಾಲ ರ್ಯಾಲಿಯಲ್ಲಿ ನಿಂತು ಕೊಂಡು ಬಂದೆ. ಕೆಪಿಸಿಸಿ ಅಧ್ಯಕ್ಷರಿಗೆ ದೊಡ್ಡಗೌಡರು ಟಾಂಗ್ ನೀಡಿದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೊದಲ ರಾತ್ರಿಗೂ ಮೊದಲೇ ಮಗುವಿಗೆ ಜನ್ಮ ನೀಡಿದ ವಧು
ಚಿನ್ನದ ದರ ಗಗನಮುಖಿ; ಭೀಮಾತೀರದಲ್ಲಿ ಗನ್ ತೋರಿಸಿ ಚಿನ್ನದಂಗಡಿ ಲೂಟಿ, ಬೆಚ್ಚಿ ಬೀಳಿಸಿದ ಸಿಸಿಟಿವಿ ದೃಶ್ಯ!