
ನವದೆಹಲಿ (ಫೆ.21): ಬ್ಯಾಂಕುಗಳಿಗೆ ಸಾವಿರಾರು ಕೋಟಿ ಸಾಲ ಮರು ಪಾವತಿಸದೇ ಲಂಡನ್’ನಲ್ಲಿ ನೆಲಸಿರುವ ಉದ್ಯಮಿ ವಿಜಯ್ ಮಲ್ಯ ಗಡಿಪಾರು ವಿಚಾರದಲ್ಲಿ ಭಾರತವು ಮಾಡಿರುವ ಮನವಿಗೆ ಬ್ರಿಟನ್ ಧನಾತ್ಮಕವಾಗಿ ಸ್ಪಂದಿಸಿದೆಯೆಂದು ವರದಿಯಾಗಿದೆ.
ಜತೆಗೆ, ಐಪಿಎಲ್ ಹಗರಣದಲ್ಲಿ ಬೇಕಾಗಿರುವ ಲಲಿತ್ ಮೋದಿ, 1993 ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪಿ ಟೈಗರ್ ಮೆಮನ್ ಅವರ ವಿರುದ್ಧವೂ ಬ್ರಿಟನ್ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದೆಯೆಂದು ಹೇಳಲಾಗಿದೆ.
ಕಳೆದ ಸೋಮವಾರ ಕೇಂದ್ರ ಗೃಹ ಇಲಾಖೆಯು ವಿಜಯ್ ಮಲ್ಯ ಗಡಿಪಾರಿಗೆ ಸಂಬಂಧಿಸಿದ ಕೋರ್ಟ್ ಮನವಿಯನ್ನು ವಿದೇಶಾಂಗ ವ್ಯವಹಾರ ಇಲಾಖೆಗೆ ರವಾನಿಸಿದೆ.
ಭಾರತ- ಬ್ರಿಟನ್ ಪರಸ್ಪರ ಕಾನೂನು ನೆರವು ಒಪ್ಪಂದ (MLAT)ಯ ಆಧಾರದಲ್ಲಿ ಮಲ್ಯರನ್ನು ಭಾರತಕ್ಕೆ ವಾಪಾಸು ಕರೆ ತರಲು ಜಾರಿ ನಿರ್ದೇಶನಾಲಯವು (ಇ.ಡಿ) ಮಾಡಿರುವ ಮನವಿಗೆ ಮುಂಬೈ ವಿಶೇಷ ನ್ಯಾಯಾಲಯವು ಸಮ್ಮತಿಸಿದ್ದು, ಆ ವಿವರಗಳನ್ನು ಗೃಹ ಇಲಾಖೆಯು ವಿದೇಶಾಂಗ ಇಲಾಖೆಗೆ ಒದಗಿಸಿದೆ. ಆ ದಾಖಲೆಗಳನ್ನು ವಿದೇಶಾಂಗ ಇಲಾಖೆಯು ಬ್ರಿಟನ್ ಸರ್ಕಾರಕ್ಕೆ ಸಲ್ಲಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.