
ಬೆಂಗಳೂರು(ಫೆ.04): ಎಸ್. ಎಂ ಕೃಷ್ಣ ಸಧ್ಯದಲ್ಲೇ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಈವರೆಗಿನ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕಲಬುರ್ಗಿಯಲ್ಲಿ ಹೇಳಿಕೆ ನೀಡಿದ ಬಿಎಸ್'ವೈ 'ಪ್ರಧಾನಿ ಮೋದಿಯ ಮೇಲೆ ಅಪಾರ ಗೌರವ ಇರುವುದರಿಂದ ಬಿಜೆಪಿ ಸೇರ್ಪಡೆಯಾಗುತ್ತೇನೆಂದು ಎಸ್. ಎಂ ಕೃಷ್ಣ ಹೇಳಿದ್ದಾರೆ. ಇದಕ್ಕೆ ನನ್ನ ಯಾವುದೇ ರೀತಿಯ ಆಕ್ಷೇಪವಿಲ್ಲ' ಎಂದಿದ್ದಾರೆ.
ಅಲ್ಲದೇ ನಾಳೆ ಎಸ್. ಎಂ ಕೃಷ್ಣರವರನ್ನು ಭೇಟಿಯಾಗುತ್ತೇನೆ. ಇವರು ಬಿಜೆಪಿಗೆ ಸೇರ್ಪಡೆಯಾಗುವುದರಿಂದ ಬಿಜೆಪಿಯ ಶಕ್ತಿ ಇನ್ನಷ್ಟು ಹೆಚ್ಚಲಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.