ಡಿಕೆಶಿಗೆ ತಪ್ಪಿನ ಅರಿವು ಆಗಿರುವುದು ಸಂತೋಷ : ಬಿಎಸ್ ವೈ

Published : Oct 20, 2018, 10:05 AM IST
ಡಿಕೆಶಿಗೆ ತಪ್ಪಿನ ಅರಿವು ಆಗಿರುವುದು ಸಂತೋಷ : ಬಿಎಸ್ ವೈ

ಸಾರಾಂಶ

ಡಿ.ಕೆ ಶಿವಕುಮಾರ್ ಅವರಿಗೆ ಇದೀಗ ತಪ್ಪಿನ ಅರಿವಾಗಿರುವುದು ಸಂತೋಷದ ಸಂಗತಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. 

ಬೈಂದೂರು :  ‘ಈಗಲಾದರೂ ಸಚಿವ ಡಿ.ಕೆ. ಶಿವಕುಮಾರ್‌ ಅವರಿಗೆ ತಮ್ಮ ಪಕ್ಷ ಮಾಡಿರುವ ತಪ್ಪಿನ ಅರಿವಾಗಿರುವುದು ಸಂತೋಷದ ಸಂಗತಿ.

ವೀರಶೈವ-ಲಿಂಗಾಯತ ಅಂತ ಗೊಂದಲ ಜಗಳ ತಂದಿಟ್ಟು, ಚುನಾವಣೆಯಲ್ಲಿ ಹಿನ್ನಡೆಯಾಗಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ. ಇನ್ನು ಮುಂದೆಯಾದರೂ ಜಾತಿ-ಧರ್ಮದ ವಿಚಾರದಲ್ಲಿ ಗೊಂದಲ ಮಾಡುವ ಕೆಲಸವನ್ನು ಕಾಂಗ್ರೆಸ್‌ ಬಿಟ್ಟು ಬಿಡಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಗುರುವಾರ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮತ ಪ್ರಚಾರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜಕೀಯ ಮಾಡೋಣ, ಆದರೆ ಜಾತಿ ಮತ್ತು ಸಮಾಜ ಒಡೆಯುವ ಕೆಲಸವನ್ನು ಯಾರೂ ಮಾಡುವುದು ಬೇಡ. ಜಾತಿಗಳ ನಡುವೆ ಜಗಳ ತಂದಿಟ್ಟು ಕಾಂಗ್ರೆಸ್‌ ಈಗಾಗಲೇ ಕೈಸುಟ್ಟುಕೊಂಡಿದೆ ಎಂದರು.

ಇದೇ ವೇಳೆ, ಕಾಂಗ್ರೆಸ್‌ ನಾಯಕರಾದ ಎಂ.ಬಿ.ಪಾಟೀಲ್, ಕುಲಕರ್ಣಿ ಅವರ ಹೇಳಿಕೆಗಳಿಗೆ ಉತ್ತರಿಸುವುದಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೆಲ್ಮೆಟ್ ಇಲ್ಲದ ಬೈಕ್ ಸವಾರನ ಹಿಡಿದ ಪೊಲೀಸ್, ಒಂದೇ ಮಾತಿಗೆ ದಂಡ ವಿಧಿಸದೆ ಬಿಟ್ಟುಕಳುಹಿಸಿದ್ರು
ಗ್ರೀನ್ ಕಾರ್ಡ್ ಸಂದರ್ಶನದ ವೇಳೆ 30 ವರ್ಷಗಳಿಂದ ಅಮೆರಿಕಾದಲ್ಲಿ ವಾಸವಿದ್ದ ಭಾರತೀಯ ಮಹಿಳೆಯ ಬಂಧನ