
ನಂಜನಗೂಡು [ಜೂ.18]: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಅಭಿಷೇಕ ಸಮಯಕ್ಕೆ ಆಗಮಿಸಿದ ಅವರು ಶ್ರೀಕಂಠೇಶ್ವರ ದೇವಾಲಯದ ಗರ್ಭಗುಡಿಯಲ್ಲಿ ಶ್ರೀಕಂಠೇಶ್ವರನಿಗೆ ಅಭಿಷೇಕ ಸಲ್ಲಿಸಿ ಬಿಲ್ವಪತ್ರೆ, ಹೂವುಗಳನ್ನು ಸಮರ್ಪಿಸಿದರು. ಸುಮಾರು 25 ನಿಮಿಷಗಳ ಕಾಲ ಶಾಂತವಾಗಿ ದೇವರ ಮುಂದೆ ಕುಳಿತು ಧ್ಯಾನದಲ್ಲಿ ಮಗ್ನರಾಗಿ ವರ ಬೇಡಿದರು.
ನಂತರ ದೇಗುಲದ ಅರ್ಚಕರು ಪ್ರಸಾದ ನೀಡಿ ಶುಭ ಹಾರೈಸಿದರು. ದೇವಾಲಯದ ವತಿಯಿಂದ ಅವರಿಗೆ ಫಲತಾಂಬೂಲ ವಸ್ತ್ರಗಳನ್ನು ನೀಡಿ ಗೌರವಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.