
ಬೆಂಗಳೂರು : ತಮ್ಮ ಅದೃಷ್ಟದ ನಿವಾಸ ನೀಡುವ ಬದಲು ರಾಜ್ಯ ಸರ್ಕಾರವು ಬೇರೆ ನಿವಾಸ ನೀಡಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದು, ಹಂಚಿಕೆ ಮಾಡಿರುವ ಸರ್ಕಾರಿ ವಸತಿಯನ್ನು ತಿರಸ್ಕರಿಸಿದ್ದಾರೆ.
ರೇಸ್ವ್ಯೂ ಕಾಟೇಜ್ ನಂ.2 ನಿವಾಸ ನೀಡುವಂತೆ ಮನವಿ ಮಾಡಿದರೂ ರಾಜ್ಯ ಸರ್ಕಾರವು ರೇಸ್ ವ್ಯೂ ಕಾಟೇಜ್ ನಂ.4 ನಿವಾಸ ಹಂಚಿಕೆ ಮಾಡಿದೆ. ಹೀಗಾಗಿ ಸರ್ಕಾರಿ ನಿವಾಸಕ್ಕೆ ತೆರಳದೆ ಸ್ವಂತ ಮನೆಯಲ್ಲಿಯೇ ಇರಲು ನಿರ್ಧರಿಸಿದ್ದಾರೆ.
ನನಗೆ ನೀಡಿರುವ ರೇಸ್ ವ್ಯೂ ಕಾಟೇಜ್ ನಂ.4 ನಿವಾಸವನ್ನು ತಿರಸ್ಕರಿಸಿದ್ದೇನೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರೇಸ್ ವ್ಯೂ ಕಾಟೇಜ್ ನಂ.2 ನಿವಾಸ ನೀಡುವಂತೆ ಮನವಿ ಮಾಡಿದ್ದೆ. ಆದರೆ, ಅವರು ನನ್ನ ಕೋರಿಕೆಯನ್ನು ಮನ್ನಿಸದ ಕಾರಣ ಅವರ ನಿರ್ಧಾರವನ್ನು ತಿರಸ್ಕರಿಸಿದ್ದೇನೆ ಮತ್ತು ಸ್ವಂತ ಮನೆಯಲ್ಲಿಯೇ ಇರಲು ನಿರ್ಧಸಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.