ಸಾಲಮನ್ನಾ ಬಗ್ಗೆ ಇಂದೇ ನಿರ್ಧಾರವಾಗಲಿ : ಬಿಎಸ್ ವೈ

Published : May 25, 2018, 11:26 AM IST
ಸಾಲಮನ್ನಾ ಬಗ್ಗೆ ಇಂದೇ ನಿರ್ಧಾರವಾಗಲಿ : ಬಿಎಸ್ ವೈ

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡು ಆಡಳಿತ ನಡೆಸಲು ಸಜ್ಜಾಗಿವೆ.  ಈ ವೇಳೆ ನಮ್ಮದು ಸಮ್ಮಿಶ್ರ ಸರ್ಕಾರವೆಂದು ರೈತರ ಸಾಲ ಮನ್ನಾ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.   

ಬೆಂಗಳೂರು :  ರಾಜ್ಯದಲ್ಲಿ ಕಾಂಗ್ರೆಸ್ - ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡು ಆಡಳಿತ ನಡೆಸಲು ಸಜ್ಜಾಗಿವೆ.  ಈ ವೇಳೆ ನಮ್ಮದು ಸಮ್ಮಿಶ್ರ ಸರ್ಕಾರವೆಂದು ರೈತರ ಸಾಲ ಮನ್ನಾ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಅಲ್ಲದೇ  ಸಿಂಹದ ಮರಿಗಳಂತೆ ಘರ್ಜನೆ ಮಾಡುವ 104 ಶಾಸಕರು ನನ್ನ ಜೊತೆ ಸದನದಲ್ಲಿ ಕುಳಿತುಕೊಳ್ಳುತ್ತಾರೆ. ನಮ್ಮ ಹೋರಾಟ ನಿಶ್ಚಿತವಾಗಿ ನಡೆಯುತ್ತದೆ. ಸರ್ಕಾರವು ನೀಡಿದ ಸಾಲ ಮನ್ನಾ ಭರವಸೆಯನ್ನು ಈಡೇರಿಸಲೇಬೇಕು. 

ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದೇ ಸ್ಪಷ್ಟವಾಗಿ ತಿಳಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಿಯೇ ಮಾಡುತ್ತೇವೆ ಎಂದು ಬಿಎಸ್ ವೈ ಹೇಳಿದ್ದಾರೆ.  

ಅಲ್ಲದೇ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಸದ್ಯ ಮೈತ್ರಿ ಸರ್ಕಾರವಿದ್ದು, ಕಾಂಗ್ರೆಸ್ ನ್ನು ಜೆಡಿಎಸ್ ಪಕ್ಷವೇ ಮುಗಿಸಲು ಹೊರಟಿದೆ. ಹೀಗಾಗಿ ಕಾಂಗ್ರೆಸ್ ಬಗ್ಗೆ ತಾವು ಮಾತನಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಡಿಗೋ ಬಿಕ್ಕಟ್ಟಿನ ಬಳಿಕ ಎಚ್ಚೆತ್ತ ಕೇಂದ್ರ ಸರ್ಕಾರ, ಎರಡು ಹೊಸ ಏರ್‌ಲೈನ್ಸ್‌ಗೆ ಸಿಕ್ತು NOC
ಸಕಾಲಕ್ಕೆ ಬಾರದ ಆ್ಯಂಬುಲೆನ್ಸ್ ಚಾಲಕ; ಚಿಕಿತ್ಸೆ ಸಿಗದೆ ವೃದ್ಧ ಸಾವು, ಆಕ್ರೋಶಗೊಂಡ ಕುಟುಂಬಸ್ಥರಿಂದ ಕಲ್ಲೆಸೆತ!