BSY ಆಪ್ತ ಐವರಿಗೆ ಬಂಪರ್ : ಸಚಿವ ಸ್ಥಾನ ಪಕ್ಕಾ

Published : Aug 17, 2019, 07:36 AM ISTUpdated : Aug 17, 2019, 09:10 AM IST
BSY ಆಪ್ತ ಐವರಿಗೆ ಬಂಪರ್ : ಸಚಿವ ಸ್ಥಾನ ಪಕ್ಕಾ

ಸಾರಾಂಶ

ಯಡಿಯೂರಪ್ಪ ಆಪ್ತ ಐವರಿಗೆ ಸಚಿವ ಸ್ಥಾನ ನೀಡುವುದು ಬಹುತೇಕ ಖಚಿತವಾದಂತಾಗಿದೆ. ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಸಿದ್ದವರಿಗೆ ಬಂಪರ್ ನೀಡಲಾಗುತ್ತಿದೆ. 

ಬೆಂಗಳೂರು [ಆ.16] : ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ತೆರೆಮರೆಯಲ್ಲಿ ಬಹುವಾಗಿ ಶ್ರಮಿಸಿದ ಪಕ್ಷದ ಹಲವು ಶಾಸಕರು ಹಾಗೂ ಮುಖಂಡರ ಪೈಕಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

ಶಾಸಕರಾದ ಅರವಿಂದ್‌ ಲಿಂಬಾವಳಿ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಎಸ್‌.ಆರ್‌.ವಿಶ್ವನಾಥ್‌, ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್‌ ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್‌.ಆರ್‌.ಸಂತೋಷ್‌ ಅವರು ಸರ್ಕಾರ ರಚಿಸುವುದಕ್ಕೆ ಬೇಕಾದ ಪೂರಕ ವಾತಾವರಣವನ್ನು ನಿರ್ಮಿಸುವಲ್ಲಿ ಹಲವು ತಿಂಗಳುಗಳಿಂದ ತಂತ್ರಗಾರಿಕೆ ರೂಪಿಸಿ ಸಾಕಷ್ಟುಶ್ರಮ ವಹಿಸಿದ್ದರು. ಇವರನ್ನು ಹೊರತುಪಡಿಸಿ ಇತರ ಕೆಲವು ಶಾಸಕರು ಹಾಗೂ ಮುಖಂಡರಿದ್ದರೂ ಐವರ ಪಾತ್ರ ಮುಖ್ಯವಾದದ್ದು.

BSY ಸಂಪುಟಕ್ಕೆ ಮುಹೂರ್ತ ಫಿಕ್ಸ್ : ಎಷ್ಟು ಮಂದಿಗೆ ಮಂತ್ರಿ ಸ್ಥಾನ?

ಈ ಪೈಕಿ ಯಡಿಯೂರಪ್ಪ ಅವರ ಆಪ್ತ ಸಹಾಯಕವಾಗಿರುವ ಸಂತೋಷ್‌ ಅವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಅವರು ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿಯೇ ಮುಂದುವರೆಯಲಿದ್ದಾರೆ. ಆದರೆ, ಇನ್ನುಳಿದ ನಾಲ್ವರ ಪೈಕಿ ಎಲ್ಲರೂ ಸಚಿವ ಸ್ಥಾನದ ಬಗ್ಗೆ ಆಕಾಂಕ್ಷೆ ಹೊಂದಿದ್ದಾರೆ. ಯಡಿಯೂರಪ್ಪ ಅವರಿಗೂ ಲಿಂಬಾವಳಿ, ಅಶ್ವತ್ಥನಾರಾಯಣ, ವಿಶ್ವನಾಥ್‌ ಹಾಗೂ ಯೋಗೇಶ್ವರ್‌ ಅವರೆಲ್ಲರಿಗೂ ಸಚಿವ ಸ್ಥಾನ ನೀಡುವ ಬಗ್ಗೆ ಒಲವಿದೆ. ಆದರೆ, ಪಕ್ಷದ ಹೈಕಮಾಂಡ್‌ ಎಷ್ಟುಮಂದಿಗೆ ಹಸಿರು ನಿಶಾನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕು.

ಸದ್ಯಕ್ಕೆ ಲಭಿಸಿರುವ ಮಾಹಿತಿ ಅನುಸಾರ ಅರವಿಂದ್‌ ಲಿಂಬಾವಳಿ ಮತ್ತು ಯೋಗೇಶ್ವರ್‌ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎಂಬ ಮಾತು ಪಕ್ಷದಿಂದ ಕೇಳಿಬಂದಿದೆ. ಲಿಂಬಾವಳಿ ಅವರಿಗೆ ಹಿರಿತನ ಮತ್ತು ಪಕ್ಷ ಸಂಘಟನೆಯ ಅನುಭವದ ಆಧಾರದ ಮೇಲೆ ಸಚಿವ ಸ್ಥಾನ ನೀಡುವ ಸಾಧ್ಯತೆ ಹೆಚ್ಚಾಗಿದೆ. ಪಕ್ಷದ ಮುಂದಿನ ರಾಜ್ಯಾಧ್ಯಕ್ಷ ಹುದ್ದೆಯ ರೇಸ್‌ನಲ್ಲೂ ಅವರ ಹೆಸರು ಮುಂಚೂಣಿಯಲ್ಲಿರುವುದರಿಂದ ಎರಡರಲ್ಲಿ ಒಂದು ಸ್ಥಾನ ಪಕ್ಕಾ ಎನ್ನಲಾಗುತ್ತಿದೆ.

ಇನ್ನು ಡಾ.ಅಶ್ವತ್ಥ ನಾರಾಯಣ ಮತ್ತು ಎಸ್‌.ಆರ್‌.ವಿಶ್ವನಾಥ್‌ ಇಬ್ಬರೂ ಮೂರನೇ ಬಾರಿ ಶಾಸಕರಾಗಿದ್ದಾರೆ. ಆದರೆ, ಸರ್ಕಾರ ರಚನೆಯಲ್ಲಿ ವಿಶ್ವನಾಥ್‌ ಅವರಿಗೆ ಹೋಲಿಸಿದರೆ ಅಶ್ವತ್ಥನಾರಾಯಣ ಅವರ ಪಾತ್ರ ದೊಡ್ಡದು. ಹೆಚ್ಚೂ ಕಡಮೆ ತಿಂಗಳುಗಟ್ಟಲೇ ಇದಕ್ಕಾಗಿಯೇ ಸಮಯವನ್ನು ಮೀಸಲಿಟ್ಟಿದ್ದಾರೆ. ಆದರೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಅನರ್ಹ ಶಾಸಕರಿಗೂ ಭವಿಷ್ಯದಲ್ಲಿ ಸಚಿವ ಸ್ಥಾನ ನೀಡಬೇಕಾಗಿರುವುದರಿಂದ ಬಿಜೆಪಿಗರಿಗೆ ಸಚಿವ ಸ್ಥಾನಗಳ ಕೊರತೆ ಎದುರಾಗಲಿದೆ. ಹೀಗಾಗಿ, ಅಶ್ವತ್ಥನಾರಾಯಣ ಅವರಿಗೆ ಸಚಿವ ಸ್ಥಾನ ಸಿಗುತ್ತದೆಯೊ ಅಥವಾ ಬೇರೊಂದು ಹುದ್ದೆಯನ್ನು ನೀಡಿ ಸಮಾಧಾನ ಮಾಡಲಾಗುತ್ತದೆಯೊ ಎಂಬುದು ಸ್ಪಷ್ಟವಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಈ ರೈಲಿನಲ್ಲಿ ಊಟಕ್ಕೆ ದುಡ್ಡೇ ಬೇಡ! ಇದು ಉಚಿತ ಊಟ ನೀಡುವ ದೇಶದ ಏಕೈಕ ರೈಲು, ನೀವು ಪ್ರಯಾಣಿಸಿದ್ದೀರಾ?
ಮನ್ರೆಗಾ ಹೆಸರು ಬದಲಿಸಲು ಇಚ್ಛಿಸಿದ ಮೋದಿ ಸರ್ಕಾರ, ಇನ್ಮುಂದೆ ಇದು VBGRAMG!