
ನವದೆಹಲಿ (ಫೆ.10): ಸೇನೆಯಲ್ಲಿ ಕಳಪೆ ಆಹಾರ ನೀಡುತ್ತಾರೆಂದು ದೂರು ನೀಡಿದ್ದ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ರನ್ನು ಬಂಧಿಸಿಲ್ಲ ಬದಲಿಗೆ ಬೇರೊಂದು ಘಟಕಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಗೃಹಸಚಿವಾಲಯವು ದೆಹಲಿ ನ್ಯಾಯಾಲಯಕ್ಕೆ ತಿಳಿಸಿದೆ.
ಸೇನೆ ಯಲ್ಲಿ ಕಳಪೆ ಆಹಾರ ನೀಡುತ್ತಾರೆಂದು ಆರೋಪಿಸಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಇದು ವೈರಲ್ ಆಗಿತ್ತು. ಅದಾದ ಬಳಿಕ ಬಹದ್ದೂರು ಹೆಂಡತಿ ಶರ್ಮಿಲಾ, 3 ದಿನಗಳಿಂದ ನನ್ನ ಗಂಡ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಹೈಕೋರ್ಟಿನಲ್ಲಿ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದರು. ಯಾಕೆ ಶರ್ಮಿಳಾರವರಿಗೆ ತನ್ನ ಗಂಡನ ಭೇಟಿಗೆ ಅವಕಾಶ ನೀಡುತ್ತಿಲ್ಲವೆಂದು ಕೋರ್ಟ್ ಪ್ರಶ್ನಿಸಿತ್ತು.
ಇದೀಗ ಗೃಹಸಚಿವಾಯವು ಬಹದ್ದೂರ್ ರವರನ್ನು ಬಂಧಿಸಿಲ್ಲ, ಬೇರೋಂದು ಘಟಕಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.