
ನವದೆಹಲಿ (ಏ.19): ತನ್ನ ರೆಜಿಮೆಂಟ್ ನಲ್ಲಿ ಕಳಪೆ ಆಹಾರ ನೀಡುತ್ತಾರೆಂದು ದೂರಿ ಸಾಮಾಜಿಕ ತಾಣಗಳಲ್ಲಿ ವಿಡಿಯೋಗಳಲ್ಲಿ ಹರಿಯಬಿಟ್ಟ ಬಿಎಸ್ ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ರನ್ನು ಸುಳ್ಳು ಆರೋಪ ಮಾಡಿದ್ದಾರೆಂದು ಸೇವೆಯಿಂದ ತೆಗೆದು ಹಾಕಲಾಗಿದೆ.
ತೇಜ್ ಬಹದ್ದೂರ್ ಯಾದವ್ ತನ್ನ ಹಿರಿಯ ಅಧಿಕಾರಿಗಳ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆಂದು ಆಂತರಿಕ ತನಿಖೆಯ ಬಳಿಕ ತಿಳಿದು ಬಂದಿದೆ. ಸೇನಾ ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ತಾಣಗಳಲ್ಲಿ ವಿಡಿಯೋವನ್ನು ಅಪ್ ಲೋಡ್ ಮಾಡಿದ್ದಾರೆ. ಹಾಗಾಗಿ ಅವರನ್ನು ಸೇವೆಯಿಂದ ತೆಗೆದು ಹಾಕಲು ನಿರ್ಧರಿಸಲಾಗಿದೆ.ಈ ನಿರ್ಧಾರದ ವಿರುದ್ಧ ಮನವಿ ಸಲ್ಲಿಸಲು ತೇಜ್ ಬಹದ್ದೂರ್ ಗೆ 3 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.