Aug 21, 2018, 7:05 PM IST
ತಿರುವನಂತಪುರಂ(ಆ.21): ಜಲಪ್ರಳಯಕ್ಕೆ ನಲುಗಿದ ದೇವರನಾಡು ಕೇರಳದಲ್ಲಿ ಮಳೆ ಪ್ರಮಾಣ ತುಸು ತಗ್ಗಿದೆ. ಈ ಹಿನ್ನೆಲೆಯಲ್ಲಿ ಕೇರಳದಾದ್ಯಂತ ಇದೀಗ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದೆ.
ಪ್ರವಾಹಕ್ಕೆ ಕಸದಿಂದ ತುಂಬಿ ಹೋಗಿದ್ದ ನಗರಗಳಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದ್ದು, ಇಂದು ತ್ರಿಶೂರ್ ನ ಚಾಲುಕುಡಿ ಮಾರ್ಕೆಟ್ ನಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ಇಂದು ಬೆಳಗ್ಗೆಯಿಂದಲೇ ಬಿಎಸ್ಎಫ್ ಯೋಧರಿಂದ ಸ್ವಚ್ಚತಾ ಕಾರ್ಯ ನಡೆಯುತ್ತಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..