
ಶ್ರೀನಗರ(ಅ.28): ಗಡಿಯಲ್ಲಿ ಪಾಕ್ ಸೇನೆ ಪುಂಡಾಟಿಕೆ ಹೆಚ್ಚಾದ ಹಿನ್ನಲೆಯಲ್ಲಿ ತಕ್ಕ ಉತ್ತರ ನೀಡುವ ಸಲುವಾಗಿ ನಡೆದ ಕಾರ್ಯಚರಣೆಯಲ್ಲಿ ಬಿಎಸ್ಎಫ್ ಯೋಧರು 15 ಮಂದಿ ಪಾಕ್ ಸೈನಿಕರನ್ನು ಹತ್ಯೆ ಮಾಡಿದ್ದಾರೆ.
ಜಮ್ಮು-ಕಾಶ್ಮೀರ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಉಪಟಳ ನೀಡುತ್ತಿರುವ ಪಾಕ್ ಯೋಧರು ಪದೇ ಪದೇ ಗುಂಡಿನ ದಾಳಿ ನಡೆಸುತ್ತಿದ್ದರು ಎನ್ನಲಾಗಿದ್ದು, ಪಾಕ್ ಸೇನೆ ಪುಂಡಾಟಿಕೆಗೆ ತಕ್ಕ ಉತ್ತರ ನೀಡಿದ ಬಿಎಸ್ಎಫ್ 15 ಮಂದಿ ಪಾಕ್ ಯೋಧರನ್ನು ಹೊಡೆದು ಉರುಳಿಸಿದೆ.
ಗಡಿಯಲ್ಲಿ ಪಾಕ್ನಿಂದ ಫೈರಿಂಗ್ ಹಿನ್ನೆಲೆಯಲ್ಲಿ, ಪಾಕ್ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರಿಂದಲೂ ದಾಳಿ ನಡೆದಿದೆ ಎನ್ನಲಾಗಿದ್ದು, ಈ ಸಂಧರ್ಭದಲ್ಲಿ ಭಾರತೀಯ ಪಡೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.