ತಮಿಳುನಾಡು ವಾಹನಗಳನ್ನು ಟಾರ್ಗೆಟ್ ಮಾಡುತ್ತಿರುವ ಕನ್ನಡ ಸಂಘಟನೆಗಳ ವಿರುದ್ಧ ಬಿಎಸ್'ಪಿ ಮುಖಂಡರ ಆಕ್ಷೇಪ

Published : Sep 13, 2016, 09:56 AM ISTUpdated : Apr 11, 2018, 12:50 PM IST
ತಮಿಳುನಾಡು ವಾಹನಗಳನ್ನು ಟಾರ್ಗೆಟ್ ಮಾಡುತ್ತಿರುವ ಕನ್ನಡ ಸಂಘಟನೆಗಳ ವಿರುದ್ಧ ಬಿಎಸ್'ಪಿ ಮುಖಂಡರ ಆಕ್ಷೇಪ

ಸಾರಾಂಶ

ಬೆಂಗಳೂರು(ಸೆ. 13): ಕನ್ನಡ ಸಂಘಟನೆಗಳು ತಮಿಳಿಗರು ಹಾಗೂ ತಮಿಳುನಾಡಿನ ವಾಹನಗಳನ್ನು ಬೇಕಂತಲೇ ಗುರಿಯಾಗಿಸಿ ಹಲ್ಲೆ ನಡೆಸುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷ ಆರೋಪಿಸಿದೆ. ಪಕ್ಷದ ರಾಜ್ಯ ಉಸ್ತುವಾರಿ ಮಾರಸಂದ್ರ ಮುನಿಯಪ್ಪನವರು ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮಿಳು ಭಾಷಿಕರೆಂಬ ಕಾರಣಕ್ಕೆ ಕನ್ನಡ ಸಂಘಟನೆಗಳ ಕಾರ್ಯಕರ್ತರು ಕೂಲಿ-ಕಾರ್ಮಿಕರನ್ನು ಟಾರ್ಗೆಟ್ ಮಾಡುತ್ತಿವೆ ಎಂದು ಮುನಿಯಪ್ಪ ವಿಷಾದಿಸಿದ್ದಾರೆ. ಅಲ್ಲದೇ, ತಮಿಳುನಾಡಿನ ರಿಜಿಸ್ಟ್ರೇಷನ್ ಹೊಂದಿರುವ ವಾಹನಗಳನ್ನು ಹುಡುಕಿಹುಡುಕಿ ಹೊಡೆಯುತ್ತಿರುವುದು ಸರಿಯಲ್ಲ ಎಂದೂ ಬಿಎಸ್'ಪಿ ಮುಖಂಡರು ತಮ್ಮ ಪತ್ರದಲ್ಲಿ ಆಕ್ಷೇಪಿಸಿದ್ದಾರೆ. ತಮಿಳರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಸರಕಾರ ಹತ್ತಿಕ್ಕುತ್ತಿಲ್ಲ. ತಮಿಳರ ಮೇಲೆ ಹಲ್ಲೆ ಮುಂದುವರಿದರೆ ಅದಕ್ಕೆ ಸರಕಾರವೇ ಹೊಣೆ ಎಂದು ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು