
ಬೀದರ್ : ಬಹುಜನ ಸಮಾಜ ಪಕ್ಷ (ಬಿಎಸ್ಪಿ)ದ ರಾಜ್ಯ ನಾಯಕರ ನಡೆಗೆ ಬೇಸರ ವ್ಯಕ್ತಪಡಿಸಿ ಮಾಜಿ ಶಾಸಕ ಜುಲ್ಫೀಕರ್ ಹಾಶ್ಮಿ, ಪಕ್ಷದ ಜಿಲ್ಲಾಧ್ಯಕ್ಷ ಅಂಕುಶ ಗೋಖಲೆ ಹಾಗೂ ತಾಲೂಕು ಅಧ್ಯಕ್ಷರು ಪಕ್ಷಕ್ಕೆ ಸಾಮೂಹಿಕ ರಾಜಿನಾಮೆ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ.
ನಗರದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಸೈಯದ್ ಜುಲ್ಫೀಕರ್ ಅವರು, ಬಿಎಸ್ಪಿ ರಾಜ್ಯ ಉಸ್ತುವಾರಿ ಅಶೋಕ ಸಿದ್ದಾರ್ಥ, ರಾಜ್ಯದ ಮಾರಸಂದ್ರ ಮುನಿಯಪ್ಪ ಹಾಗೂ ಎನ್.ಮಹೇಶ್ ಅವರು ಪಕ್ಷದ ಟಿಕೆಟ್ ಮಾರಾಟ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಬಿಎಸ್ಪಿಯವರು ಜೆಡಿಎಸ್ನೊಂದಿಗೆ ಕೈ ಜೋಡಿಸಿದರೆ, ಜೆಡಿಎಸ್ನವರು ರಾಜ್ಯಾದ್ಯಂತ ಬಿಜೆಪಿಯೊಂದಿಗೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದ ಮುಖಂಡರು, ಮುಂಬರುವ ಚುನಾವಣೆಯಲ್ಲಿ ಮಾರಸಂದ್ರ ಮುನಿಯಪ್ಪ ನಮ್ಮ ವಿರೋಧಿ ರಹೀಮ್ಖಾನ್ಗೆ ಟಿಕೆಟ್ ಮಾರಾಟ ಮಾಡಿದ್ದಾರೆ.
ಕಳೆದ ಚುನಾವಣೆಯಲ್ಲಿ ರಾಜ್ಯದಲ್ಲೇ ಬಿಎಸ್ಪಿಯಿಂದ ಅತೀ ಹೆಚ್ಚು ಮತ ಪಡೆದಿದ್ದರೂ ಈ ಬಾರಿ ನನಗೆ ಟಿಕೆಟ್ ನಿರಾಕರಿಸಲಾಗಿದೆ. ರಾಜಕೀಯದಲ್ಲಿ ಸೋಲು-ಗೆಲುವು ಇದ್ದದ್ದೆ. ಹೀಗಾಗಿ ಗೋಖಲೆ ಹಾಗೂ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಗ್ಯಾರಂಟಿ ಎಂದು ಹಾಶ್ಮಿ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.