ನಮ್ಮ ಪಕ್ಷದ ನಿರ್ದೇಶನದಂತೆ ವಿಶ್ವಾಸಮತಕ್ಕೆ ಗೈರಾಗಿದ್ದೆ ಎಂದ ಶಾಸಕ

Published : Aug 01, 2019, 09:49 AM ISTUpdated : Aug 01, 2019, 12:55 PM IST
ನಮ್ಮ ಪಕ್ಷದ ನಿರ್ದೇಶನದಂತೆ ವಿಶ್ವಾಸಮತಕ್ಕೆ ಗೈರಾಗಿದ್ದೆ ಎಂದ ಶಾಸಕ

ಸಾರಾಂಶ

ರಾಜ್ಯದಲ್ಲಿ ದೋಸ್ತಿ ಸರ್ಕಾರ  ಅಧಿಕಾರ ಕಳೆದುಕೊಂಡಿದೆ. ಬಿಜೆಪಿ ಅಧಿಕಾರಕ್ಕೆ ಏರಿದೆ. ಇದೇ ಸಂದರ್ಭದಲ್ಲಿ ಶಾಸಕರೋರ್ವರು ತಮ್ಮ ಪಕ್ಷದ ನಿರ್ದೇಶನದಂತೆ ವಿಶ್ವಾಸಮತಕ್ಕೆ ಗೈರಾಗಿದ್ದಾಗಿ ಹೇಳಿದ್ದಾರೆ.

ಬೆಂಗಳೂರು [ಅ.01]:  ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತುಪಡಿಸುವ ವೇಳೆ ವಿಧಾನಸಭಾ ಕಲಾಪಕ್ಕೆ ಗೈರು ಹಾಜರಾದ ಕುರಿತು ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿವರಣೆ ನೀಡಿದರು. 

ಕಲಾಪ ಆರಂಭವಾಗುವ ಮುನ್ನ ಪ್ರತಿಪಕ್ಷದ ಮೊಗಸಾಲೆಯಲ್ಲಿ ಉಭಯ ನಾಯಕರು ಮಾತನಾಡಿಕೊಂಡಿದ್ದು, ಈ ವೇಳೆ ಪಕ್ಷದ ನಿರ್ದೇಶನದಂತೆ ಗೈರು ಹಾಜರಾಗಿರುವುದಾಗಿ ಮಹೇಶ್‌ ಸ್ಪಷ್ಟನೆ ನೀಡಿದರು. 

ಪಕ್ಷದಿಂದ ಅಮಾನತುಗೊಳಿಸಿರುವುದಕ್ಕೆ ಕಾರಣವೇನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹೇಶ್‌, ಅದು ಗೊತ್ತಿಲ್ಲ. ಅವರ ಕಾರ್ಯವೈಖರಿ ಗೊತ್ತಲ್ವಾ ಎಂದು ಹೇಳಿದರು. 

ನಂತರ ಮಾತನಾಡಿದ ಸಿದ್ದರಾಮಯ್ಯ, ರಾಜಕೀಯವಾಗಿ ಒಂದು ನಿಲುವನ್ನು ಹೊಂದಿರಬೇಕು. ಜಾತ್ಯತೀತ ನಿಲುವಿನ ಜತೆಗೆ ಇರಿ ಎಂದು ಸಲಹೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಡಿ.20ಕ್ಕೆ ಚಿತ್ರಕಲಾ ಸ್ಪರ್ಧೆ: ಎಲ್ಲಿ?
ವಿಶ್ವೇಶ್ವರಯ್ಯ ಟರ್ಮಿನಲ್‌ ರೈಲು ನಿಲ್ದಾಣ ವಿಸ್ತರಣೆ ಕಾರ್ಯ ಆರಂಭ: ಪ್ರಯಾಣಿಕರು ಕಾಯುವ ದುಸ್ಥಿತಿ