
ನವದೆಹಲಿ(ಜ.27): ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಎಸ್ವೈ- ಈಶ್ವರಪ್ಪ ಒಂದುಗೂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ಒಬಿಸಿ ಮೋರ್ಚಾದ ಹೊಣೆಯನ್ನು ಈಶ್ವರಪ್ಪ ಹೆಗಲಿಗೆ ವಹಿಸಲಾಗಿದೆ.
ನಾನು ಈಶ್ವರಪ್ಪನವರು ನಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ. ಈಶ್ವರಪ್ಪ ಜೊತೆಗೆ ಒಟ್ಟಾಗಿ ಕೆಲಸ ಮಾಡಲು ತಿಳಿಸಿದ್ದಾರೆ ಇನ್ಮುಂದೆ ಯಾವುದೇ ಒಡಕು ನಮ್ಮ ಮಧ್ಯೆ ಬರಲ್ಲ ಎಂದು ಸಭೆ ಬಳಿಕ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಒಬಿಸಿ ಮೋರ್ಚಾದ ಹೊಣೆ ನೀಡಿದ್ದಕ್ಕೆ ಸಂತಸವಾಗಿದೆ. ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಆಗಲಿದ್ದಾರೆ ಎಂದು ಸಭೆ ಬಳಿಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ಮುಕ್ತಗೊಳಿಸಲು ಬಿಜೆಪಿ ಸಿದ್ಧವಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಈಶ್ವರಪ್ಪ ಭಾಗವಹಿಸಲ್ಲ ಎಂದು ಸಂಧಾನ ಸಭೆಯ ನಂತರ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರರಾವ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.