
ಬೆಂಗಳೂರು : ಶುಕ್ರವಾರ ಸಂಜೆ 5 ಗಂಟೆಗೆ ಬ್ರೇಕಿಂಗ್ ಸುದ್ದಿ ಕೊಡಲಾಗುವುದು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಟ್ವೀಟ್ ಸಂದೇಶ ಸಾಕಷ್ಟುಕುತೂಹಲ ಮೂಡಿಸಿದೆ. ಈ ಸಂದೇಶದ ಬೆನ್ನಲ್ಲೇ ನಾನಾ ರೀತಿಯ ವದಂತಿಗಳು ಹೊರಬೀಳುತ್ತಿದ್ದು, ಶುಕ್ರವಾರವೇ ಸ್ಪಷ್ಟಚಿತ್ರಣ ಸಿಗಲಿದೆ.
ವದಂತಿ 1-ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಹಗರಣವನ್ನು ಬಯಲಿಗೆ ತರುವ ಸಾಧ್ಯತೆಯಿದೆ. ಈಗಾಗಲೇ ಹಲವು ಇಲಾಖೆಗಳ ವಿರುದ್ಧ ದಾಖಲೆ ಸಮೇತ ಆರೋಪಗಳನ್ನು ಮಾಡಿರುವ ಬಿಜೆಪಿ ನಾಯಕರು ಮತ್ತೊಂದು ಹಗರಣವನ್ನು ಪ್ರಸ್ತಾಪಿಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬಹುದು. ಆದರೆ, ಯಾವ ಇಲಾಖೆಗೆ ಸೇರಿದ ಹಗರಣ ಎಂಬುದರ ಬಗ್ಗೆ ಬಿಜೆಪಿ ಮುಖಂಡರಲ್ಲಿ ಮಾಹಿತಿಯಿಲ್ಲ.
ವದಂತಿ 2-ಶುಕ್ರವಾರ ವಿಶ್ವ ನಿದ್ರಾ ದಿನ. ಈ ಹಿನ್ನೆಲೆಯಲ್ಲಿ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಗುರಿಯಾಗಿಸಿಕೊಂಡು ಹೊಸತೊಂದು ಜಾಲತಾಣ ಅಭಿಯಾನ ಆರಂಭಿಸುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಅವರು ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಕೆಲವು ಬಾರಿ ನಿದ್ರೆ ಮಾಡಿದ್ದನ್ನು ಲೇವಡಿ ಮಾಡುತ್ತಿದ್ದ ಬಿಜೆಪಿಯು ಈಗ ಅದನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಅಭಿಯಾನಕ್ಕೆ ಚಾಲನೆ ನೀಡುವ ಸಂಭವವಿದೆ.
ವದಂತಿ 3-ಅನ್ಯ ಪಕ್ಷದ ಪ್ರಮುಖ ನಾಯಕರೊಬ್ಬರು ಬಿಜೆಪಿಗೆ ಪಾದಾರ್ಪಣೆ ಮಾಡಬಹುದು. ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಇತರ ಪಕ್ಷಗಳಿಂದ ಪ್ರಭಾವಿ ಮುಖಂಡರನ್ನು ಸೆಳೆಯುವ ಬಗ್ಗೆ ತೆರೆಮರೆಯಲ್ಲಿ ಪ್ರಯತ್ನ ಆರಂಭವಾಗಿದೆ. ಹೀಗಾಗಿ, ಆ ಕುರಿತ ಸುದ್ದಿ ಶುಕ್ರವಾರ ಹೊರಬೀಳಬಹುದು ಎನ್ನಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.