ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದ್ರೆ ಸಿಎಂ ಜೈ ಶ್ರೀರಾಮ್ ಅಂತಾರೆ: ಬಿಎಸ್'ವೈ

By Suvarna Web DeskFirst Published Jan 7, 2018, 8:02 PM IST
Highlights

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟ್ವಿಟರ್'ನಲ್ಲಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು (ಜ.07): ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಟ್ವಿಟರ್'ನಲ್ಲಿ ವ್ಯಂಗ್ಯವಾಡಿದ್ದಾರೆ.

ಇನ್ನೆರಡು ಬಾರಿ ಯೋಗಿ ಆದಿತ್ಯನಾಥ್ ಬೆಂಗಳೂರಿಗೆ  ಬಂದ್ರೆ ಸಿದ್ದರಾಮಯ್ಯ ಜೈ ಶ್ರೀರಾಮ ಅಂತಾರೆ.  ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಭೇಟಿ ನೀಡಿದ್ದಕ್ಕೆ ಸಿದ್ದರಾಮಯ್ಯ ಧಾರ್ಮಿಕತೆ ಬಗ್ಗೆ ಮಾತನಾಡಿದ್ದಾರೆ.  ಮತ್ತೆ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬಂದ್ರೆ ಸಿಎಂ ಸಿದ್ದರಾಮಯ್ಯ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ರೂ ಆಶ್ಚರ್ಯವಿಲ್ಲ ಅಂತ ಬಿಎಸ್ ವೈ ಟ್ವೀಟಿಸಿದ್ದಾರೆ.

Latest Videos

 

ಯೋಗಿ ಆದಿತ್ಯನಾಥ್ ರವರು ಬೆಂಗಳೂರಿಗೆ ಬಂದಿದ್ದೇ ತಡ, ಹಿಂದೂ ದ್ವೇಷ ಕಾರುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರ್ಮಿಕತೆಯ ಬಗ್ಗೆ ಮಾತನಾಡಲು ಆರಂಭಿಸಿದ್ದಾರೆ! ಇನ್ನೆರಡು ಬಾರಿ ಯೋಗಿ ಕರ್ನಾಟಕಕ್ಕೆ ಬಂದರೆ ನವರು 'ಜೈ ಶ್ರೀ ರಾಮ್' ಎಂದು ಘೋಷಣೆ ಕೂಗಿದರೂ ಆಶ್ಚರ್ಯವಿಲ್ಲ!

https://t.co/2mnalpZEZH

— B.S. Yeddyurappa (@BSYBJP)
click me!