
ಬೆಂಗಳೂರು(ಆ.23): ಬಿಎಸ್ ಯಡಿಯೂರಪ್ಪ ವಿರುದ್ಧ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಎಫ್ಐಆರ್ ಗೆ ಮಧ್ಯಂತರ ತಡೆ ಕೋರಿ ಸಲ್ಲಿಸಿರುವ ಮನವಿ ಕುರಿತು ಇಂದು ವಾದ ನಡೆಯಲಿದೆ.
ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಗುತ್ತೋ ಇಲ್ಲವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ಹಾಗೂ ಎಸಿಬಿ ಪರ ಮಾಜಿ ಅಡ್ವೋಕೇಟ್ ಜನರಲ್ ರವಿ ವರ್ಮಾ ಕುಮಾರ್ ವಾದ ಮಂಡಿಸಲಿದ್ದಾರೆ. ಇಂದು ನಡೆಯಲಿರುವ ವಿಚಾರಣೆ ಯಡಿಯೂರಪ್ಪ ಪಾಲಿಗೆ ಅತ್ಯಂತ ಮಹತ್ವ ಪೂರ್ಣವಾಗಿದೆ. ನಾಳೆ ಬಿಎಸ್ವೈ ವಿಚಾರಣೆಗೆ ಹಾಜರಾಗುವ ಅನಿವಾರ್ಯತೆ ಇದ್ದು ಇಂದು ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಲ್ಲಿ ಸರ್ಕಾರದ ಎಲ್ಲ ತಂತ್ರಗಾರಿಕೆ ತಲೆಕೆಳಗಾಗಲಿದೆ.
ಒಂದು ವೇಳೆ ಮಧ್ಯಂತರ ತಡೆ ಸಿಗದಿದ್ದಲ್ಲಿ ಯಡಿಯೂರಪ್ಪಗೆ ಸಂಕಷ್ಟ ಎದುರಾಗಲಿದೆ. ಇನ್ನೂ ಇದೇ ಪ್ರಕರಣದಲ್ಲಿ ಇತ್ತ ವಿಚಾರಣೆಗೆ ಹಾಜರಾಗುವಂತೆ ಕೆಎಎಸ್ ಅಧಿಕಾರಿ ಬಸವರಾಜೇಂದ್ರಗೆ ಎಸಿಬಿ ಎರಡನೇ ಬಾರಿಗೆ ನೋಟಿಸ್ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.