
ಬೆಂಗಳೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಮಾಧ್ಯಮ ಸಂಚಾಲಕ ವಿನಯ್ ಅಪಹರಣ ಯತ್ನ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ ಸಂತೋಷ್ ತನಿಖಾಧಿಕಾರಿಗಳಿಗೆ ತಮ್ಮ ಮೊಬೈಲನ್ನು ನೀಡಲು ಮತ್ತೆ ನಿರಾಕರಿಸಿದ್ದಾರೆ.
ಪ್ರಕರಣದ ಸಂಬಂಧ ಮಂಗಳವಾರ 5 ತಾಸುಗಳ ವಿಚಾರಣೆ ಎದುರಿಸಿದ ಸಂತೋಷ್, ಈ ಸಂದರ್ಭದಲ್ಲಿ ಮೊಬೈಲ್ ವಶಕ್ಕೆ ನೀಡುವಂತೆ ತನಿಖಾಧಿಕಾರಿಗಳ ಸೂಚನೆಯನ್ನು ಧಿಕ್ಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಎಸಿಪಿ ಆನಂದ್.ಆರ್.ಬಡಿಗೇರ್, ತನಿಖೆ ಸಲುವಾಗಿ ತಮ್ಮ ಮೊಬೈಲನ್ನು ಸುಪರ್ದಿಗೆ ಕೊಡುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ. ಈ ನೋಟಿಸ್ಗೆ ಅವರಿಂದ ಪ್ರತಿಕ್ರಿಯೆ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತನಿಖೆ ಭಾಗಶಃ ಮುಕ್ತಾಯವಾಗಿದ್ದು, ಸಂತೋಷ್ ಅವರ ಮೊಬೈಲ್ ಪರಿಶೀಲನೆ ಮಾತ್ರ ಬಾಕಿ ಉಳಿದಿದೆ. ಈ ಮೊಬೈಲ್ನಲ್ಲಿ ಕೃತ್ಯಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿ ಇದೆ ಎಂಬ ಅನುಮಾನವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.