
ಬೆಂಗಳೂರು: ಡೈನಾಮಿಕ್ ಸಿಟಿ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದ ಬೆಂಗಳೂರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ 3ಜಿ (ಗೂಂಡಾ, ಗಾರ್ಬೇಜ್ ಮತ್ತು ಗಾಂಜಾ) ಸಿಟಿಯಾಗಿ ಪರಿವರ್ತನೆಯಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಒಂದು ಕಾಲದಲ್ಲಿ ಬೆಂಗಳೂರು ಡೈನಾಮಿಕ್ ಸಿಟಿ ಎಂಬ ಹೆಸರು ಗಳಿಸಿತ್ತು. ಅದೀಗ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಸುರಕ್ಷಿತವಲ್ಲದ ನಗರವಾಗಿ ಮಾರ್ಪಡುತ್ತಿದೆ.
ಜಗತ್ತು 5ಜಿ ತಂತ್ರಜ್ಞಾನದತ್ತ ಹೆಜ್ಜೆ ಹಾಕುತ್ತಿರುವ ವೇಳೆ ಬೆಂಗಳೂರು ಹಿಮ್ಮುಖವಾಗಿ 3ಜಿಯತ್ತ (3ಜಿ ಅಂದರೆ ಗೂಂಡಾ, ಗಾರ್ಬೇಜ್ ಮತ್ತು ಗಾಂಜಾದತ್ತ) ಚಲಿಸುತ್ತಿದೆ ಎಂದು ತೀಕ್ಷ$್ಣವಾಗಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.