ಕಾಂಗ್ರೆಸ್ ಬಗ್ಗೆ ಮೃದುಧೋರಣೆ ತೋರಿದ ಬಿಎಸ್’ವೈ

Published : Jun 06, 2018, 11:44 AM IST
ಕಾಂಗ್ರೆಸ್ ಬಗ್ಗೆ ಮೃದುಧೋರಣೆ ತೋರಿದ ಬಿಎಸ್’ವೈ

ಸಾರಾಂಶ

ಹೊಂದಾಣಿಕೆ ರಾಜಕೀಯದ ಮೂಲಕ  ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಈ ಅಪ್ಪ ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ. ಹೆಸರು ಹೇಳದೆ ದೇವೆಗೌಡರು ಮತ್ತು ಕುಮಾರಸ್ವಾಮಿರನ್ನ ಬಿಎಸ್‌ವೈ ಟೀಕಿಸಿದ್ದಾರೆ.  ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿ ಕಾಂಗ್ರೆಸ್ ಪರ ಮೃದುಧೋರಣೆ ತೋರಿದ್ದಾರೆ.

ಬೆಂಗಳೂರು (ಜೂ. 06): ಕಾಂಗ್ರೆಸ್ ಮುಗಿಸಲು ಅಪ್ಪಮಕ್ಕಳ ಸಂಚು ಮಾಡಿದ್ದಾರೆ ಎನ್ನುವ ಮೂಲಕ ಬಿಎಸ್ ವೈ ಕಾಂಗ್ರೆಸ್ ಬಗ್ಗೆ ಮತ್ತೆ ಮೃದು ಧೋರಣೆ ತೋರಿದ್ದಾರೆ. 

ಹೊಂದಾಣಿಕೆ ರಾಜಕೀಯದ ಮೂಲಕ  ಕಾಂಗ್ರೆಸ್ ಮುಗಿಸಲು ಸಂಚು ರೂಪಿಸಿದ್ದಾರೆ. ಈ ಅಪ್ಪ ಮಕ್ಕಳ ಸಂಚಿಗೆ ಕಾಂಗ್ರೆಸ್ ಬಲಿಯಾಗಲಿದೆ. ಹೆಸರು ಹೇಳದೆ ದೇವೆಗೌಡರು ಮತ್ತು ಕುಮಾರಸ್ವಾಮಿರನ್ನ ಬಿಎಸ್‌ವೈ ಟೀಕಿಸಿದ್ದಾರೆ.  ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿ ಕಾಂಗ್ರೆಸ್ ಪರ ಮೃದುಧೋರಣೆ ತೋರಿದ್ದಾರೆ.

ಕುಮಾರಸ್ವಾಮಿ ಬಜೆಟ್ ಮಂಡಿಸುವುದನ್ನು ಕಾದು ನೋಡೋಣ. ಒಂದು, ಎರಡು , ಮೂರು ತಿಂಗಳು ಕಾದು ನೋಡೋಣ. ಜಯನಗರ ಕ್ಷೇತ್ರ ಹಾಗೂ ವಿಧಾನಪರಿಷತ್‌ನಲ್ಲೂ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಅವರೇನಾದ್ರು ಮಾಡಲಿ ನಮ್ಮ ಪ್ರಯತ್ನ ಮಾತ್ರ ನಿಲ್ಲುವುದಿಲ್ಲ.  ಇಂದು ಹಲವು ಕಡೆ ವಿಧಾನಪರಿಷತ್ ಚುನಾವಣಾ ಪ್ರಚಾರಕ್ಕೆ ಹೋಗಬೇಕಿತ್ತು. ಹವಾಮಾನ ವೈಪರಿತ್ಯದಿಂದಾಗಿ ಹೆಲಿಕ್ಯಾಪ್ಟರ್ ಪ್ರಯಾಣ ರದ್ದು ಮಾಡಿ ಪ್ರಚಾರಕ್ಕೆ ಹೋಗುತ್ತಿಲ್ಲ ಎಂದು  ಮೈಸೂರಿನಲ್ಲಿ ಮಾಜಿ ಸಿಎಂ ಬಿಎಸ್‌ವೈ ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಂದೇ ಭಾರತ್ ರೈಲಿನ 'ಅತ್ಯಾಧುನಿಕ ಸೌಲಭ್ಯ' ಕಟ್; ಆದಾಯಕ್ಕಾಗಿ ಪ್ರಯಾಣಿಕರಿಗೆ ಶಾಕ್ ಕೊಟ್ಟ ರೈಲ್ವೆ ಇಲಾಖೆ!
₹46 ಲಕ್ಷದ ಅಮೆಜಾನ್ ಕೆಲಸ ತೊರೆದು ಸೇನೆಗೆ ಸೇರಿದ ಟೆಕ್ಕಿ: ಶರದೇಂದು ತಿವಾರಿ ದೇಶಪ್ರೇಮಕ್ಕೆ ಸಲಾಂ!