ಬೆಂಗಳೂರು(ಸೆ.17): ಕಾವೇರಿ ವಿಚಾರವಾಗಿ ಕಳೆದ ಸೋಮವಾರ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಸದ್ಯ ಪರಿಸ್ಥಿತಿ ತಣ್ಣಗಾಗಿದೆ. ಆದರೆ, ನಾಯಕರ ವಾಕ್ಸಮರ ಜೋರಾಗಿದೆ.
ಕಾವೇರಿ ಗಲಭೆ ಹಿಂದೆ RSS ಕೈವಾಡ ಇದೆ ಅಂತ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಪರಮೇಶ್ವರ್ ನೀಡಿದ ಹೇಳಿಕೆ ಈಗ ಬಿಜೆಪಿ ನಾಯಕರನ್ನು ಕೆರಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಗೃಹ ಸಚಿವರಿಗೆ ಒಂದು ಗೌರವ ಇದೆ, ಅದನ್ನು ಅವರು ಉಳಿಸಿಕೊಳ್ಳಲಿ ಅಂತ ಪರಮೇಶ್ವಶ್ಗೆ ತಿರುಗೇಟು ಕೊಟ್ಟಿದ್ದಾರೆ.